ಎಲ್ ಕೆ ಅಡ್ವಾಣಿ 
ದೇಶ

ಹೃದಯಕ್ಕೆ ಹತ್ತಿರವಾದ ಕನಸು ನನಸಾಗುತ್ತಿದೆ: ರಾಮ ಮಂದಿರ ಭೂಮಿ ಪೂಜೆ ಮುನ್ನಾ ದಿನ ಎಲ್ ಕೆ ಅಡ್ವಾಣಿ ಸಂದೇಶ

ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವುದಕ್ಕೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ರಾಮ ಮಂದಿರದ ಕನಸು ಹೊತ್ತವರೆಲ್ಲಾ ಈ ಶುಭ ಘಳಿಗೆಯನ್ನು ಸಂಭ್ರಮಿಸುತ್ತಿದ್ದಾರೆ. 

ನವದೆಹಲಿ: ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವುದಕ್ಕೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ರಾಮ ಮಂದಿರದ ಕನಸು ಹೊತ್ತವರೆಲ್ಲಾ ಈ ಶುಭ ಘಳಿಗೆಯನ್ನು ಸಂಭ್ರಮಿಸುತ್ತಿದ್ದಾರೆ. 

ರಾಮ ಮಂದಿರ ನಿರ್ಮಾಣಕ್ಕಾಗಿ ಆಗ್ರಹಿಸಿ ನಡೆದ ಚಳುವಳಿಯಲ್ಲಿ ಸಕ್ರಿಯರಾಗಿದ್ದ, ರಥಯಾತ್ರೆ ನಡೆಸಿದ್ದ ಮಾಜಿ ಉಪ ಪ್ರಧಾನಿ, ಗೃಹ ಸಚಿವ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಭೂಮಿ ಪೂಜೆ ಮುನ್ನಾ ದಿನ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. 
 
ನನಗಷ್ಟೇ ಅಲ್ಲದೇ ಸಮಸ್ತ ಭಾರತೀಯರಿಗೆ ಆ.05 ಐತಿಹಾಸಿಕ ಹಾಗೂ ಭಾವನಾತ್ಮಕ ದಿನ ಎಂದು ಎಲ್ ಕೆ ಅಡ್ವಾಣಿ ಮಂದಿರ ಭೂಮಿ ಪೂಜೆ ಕಾರ್ಯಕ್ರಮವನ್ನು ಬಣ್ಣಿಸಿದ್ದಾರೆ. ರಾಮ ಜನ್ಮಭೂಮಿ ಚಳುವಳಿಯಲ್ಲಿ ವಿಧಿ ನನ್ನನ್ನು  ಪ್ರಮುಖ ಪಾತ್ರ ನಿರ್ವಹಿಸುವಂತೆ ಮಾಡಿತ್ತು ಎಂದು ಅಡ್ವಾಣಿ ತಮ್ಮ ರಥಯಾತ್ರೆಯ ದಿನಗಳನ್ನು ಮೆಲುಕುಹಾಕಿದ್ದಾರೆ. 

ನಾಳಿನ ಕಾರ್ಯಕ್ರಮವನ್ನು ಎಲ್ ಕೆ ಅಡ್ವಾಣಿ ನನ್ನ ಹೃದಯಕ್ಕೆ ಹತ್ತಿರವಾದ ಕನಸು ನನಸಾಗುತ್ತಿದೆ ಎಂದು ಹೇಳಿದ್ದಾರೆ. ರಾಮನ ಆದರ್ಶಗಳನ್ನು ಅವನ ಸದ್ಗುಣಗಳನ್ನು ಅಳವಡಿಸಿಕೊಳ್ಳುವುದಕ್ಕೆ,  ಸಂಪತ್ಭರಿತ ಭಾರತಕ್ಕೆ ಮಂದಿರ ಪ್ರೇರಣೆ ನೀಡಲಿದೆ ಎಂಬುದು ನನ್ನ ನಂಬಿಕೆ ಎಂದು ಎಲ್ ಕೆ ಅಡ್ವಾಣಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT