ಎಲ್ ಕೆ ಅಡ್ವಾಣಿ 
ದೇಶ

ಹೃದಯಕ್ಕೆ ಹತ್ತಿರವಾದ ಕನಸು ನನಸಾಗುತ್ತಿದೆ: ರಾಮ ಮಂದಿರ ಭೂಮಿ ಪೂಜೆ ಮುನ್ನಾ ದಿನ ಎಲ್ ಕೆ ಅಡ್ವಾಣಿ ಸಂದೇಶ

ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವುದಕ್ಕೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ರಾಮ ಮಂದಿರದ ಕನಸು ಹೊತ್ತವರೆಲ್ಲಾ ಈ ಶುಭ ಘಳಿಗೆಯನ್ನು ಸಂಭ್ರಮಿಸುತ್ತಿದ್ದಾರೆ. 

ನವದೆಹಲಿ: ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವುದಕ್ಕೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ರಾಮ ಮಂದಿರದ ಕನಸು ಹೊತ್ತವರೆಲ್ಲಾ ಈ ಶುಭ ಘಳಿಗೆಯನ್ನು ಸಂಭ್ರಮಿಸುತ್ತಿದ್ದಾರೆ. 

ರಾಮ ಮಂದಿರ ನಿರ್ಮಾಣಕ್ಕಾಗಿ ಆಗ್ರಹಿಸಿ ನಡೆದ ಚಳುವಳಿಯಲ್ಲಿ ಸಕ್ರಿಯರಾಗಿದ್ದ, ರಥಯಾತ್ರೆ ನಡೆಸಿದ್ದ ಮಾಜಿ ಉಪ ಪ್ರಧಾನಿ, ಗೃಹ ಸಚಿವ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಭೂಮಿ ಪೂಜೆ ಮುನ್ನಾ ದಿನ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. 
 
ನನಗಷ್ಟೇ ಅಲ್ಲದೇ ಸಮಸ್ತ ಭಾರತೀಯರಿಗೆ ಆ.05 ಐತಿಹಾಸಿಕ ಹಾಗೂ ಭಾವನಾತ್ಮಕ ದಿನ ಎಂದು ಎಲ್ ಕೆ ಅಡ್ವಾಣಿ ಮಂದಿರ ಭೂಮಿ ಪೂಜೆ ಕಾರ್ಯಕ್ರಮವನ್ನು ಬಣ್ಣಿಸಿದ್ದಾರೆ. ರಾಮ ಜನ್ಮಭೂಮಿ ಚಳುವಳಿಯಲ್ಲಿ ವಿಧಿ ನನ್ನನ್ನು  ಪ್ರಮುಖ ಪಾತ್ರ ನಿರ್ವಹಿಸುವಂತೆ ಮಾಡಿತ್ತು ಎಂದು ಅಡ್ವಾಣಿ ತಮ್ಮ ರಥಯಾತ್ರೆಯ ದಿನಗಳನ್ನು ಮೆಲುಕುಹಾಕಿದ್ದಾರೆ. 

ನಾಳಿನ ಕಾರ್ಯಕ್ರಮವನ್ನು ಎಲ್ ಕೆ ಅಡ್ವಾಣಿ ನನ್ನ ಹೃದಯಕ್ಕೆ ಹತ್ತಿರವಾದ ಕನಸು ನನಸಾಗುತ್ತಿದೆ ಎಂದು ಹೇಳಿದ್ದಾರೆ. ರಾಮನ ಆದರ್ಶಗಳನ್ನು ಅವನ ಸದ್ಗುಣಗಳನ್ನು ಅಳವಡಿಸಿಕೊಳ್ಳುವುದಕ್ಕೆ,  ಸಂಪತ್ಭರಿತ ಭಾರತಕ್ಕೆ ಮಂದಿರ ಪ್ರೇರಣೆ ನೀಡಲಿದೆ ಎಂಬುದು ನನ್ನ ನಂಬಿಕೆ ಎಂದು ಎಲ್ ಕೆ ಅಡ್ವಾಣಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT