ಎಲ್ ಕೆ ಅಡ್ವಾಣಿ 
ದೇಶ

ಹೃದಯಕ್ಕೆ ಹತ್ತಿರವಾದ ಕನಸು ನನಸಾಗುತ್ತಿದೆ: ರಾಮ ಮಂದಿರ ಭೂಮಿ ಪೂಜೆ ಮುನ್ನಾ ದಿನ ಎಲ್ ಕೆ ಅಡ್ವಾಣಿ ಸಂದೇಶ

ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವುದಕ್ಕೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ರಾಮ ಮಂದಿರದ ಕನಸು ಹೊತ್ತವರೆಲ್ಲಾ ಈ ಶುಭ ಘಳಿಗೆಯನ್ನು ಸಂಭ್ರಮಿಸುತ್ತಿದ್ದಾರೆ. 

ನವದೆಹಲಿ: ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವುದಕ್ಕೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ರಾಮ ಮಂದಿರದ ಕನಸು ಹೊತ್ತವರೆಲ್ಲಾ ಈ ಶುಭ ಘಳಿಗೆಯನ್ನು ಸಂಭ್ರಮಿಸುತ್ತಿದ್ದಾರೆ. 

ರಾಮ ಮಂದಿರ ನಿರ್ಮಾಣಕ್ಕಾಗಿ ಆಗ್ರಹಿಸಿ ನಡೆದ ಚಳುವಳಿಯಲ್ಲಿ ಸಕ್ರಿಯರಾಗಿದ್ದ, ರಥಯಾತ್ರೆ ನಡೆಸಿದ್ದ ಮಾಜಿ ಉಪ ಪ್ರಧಾನಿ, ಗೃಹ ಸಚಿವ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಭೂಮಿ ಪೂಜೆ ಮುನ್ನಾ ದಿನ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. 
 
ನನಗಷ್ಟೇ ಅಲ್ಲದೇ ಸಮಸ್ತ ಭಾರತೀಯರಿಗೆ ಆ.05 ಐತಿಹಾಸಿಕ ಹಾಗೂ ಭಾವನಾತ್ಮಕ ದಿನ ಎಂದು ಎಲ್ ಕೆ ಅಡ್ವಾಣಿ ಮಂದಿರ ಭೂಮಿ ಪೂಜೆ ಕಾರ್ಯಕ್ರಮವನ್ನು ಬಣ್ಣಿಸಿದ್ದಾರೆ. ರಾಮ ಜನ್ಮಭೂಮಿ ಚಳುವಳಿಯಲ್ಲಿ ವಿಧಿ ನನ್ನನ್ನು  ಪ್ರಮುಖ ಪಾತ್ರ ನಿರ್ವಹಿಸುವಂತೆ ಮಾಡಿತ್ತು ಎಂದು ಅಡ್ವಾಣಿ ತಮ್ಮ ರಥಯಾತ್ರೆಯ ದಿನಗಳನ್ನು ಮೆಲುಕುಹಾಕಿದ್ದಾರೆ. 

ನಾಳಿನ ಕಾರ್ಯಕ್ರಮವನ್ನು ಎಲ್ ಕೆ ಅಡ್ವಾಣಿ ನನ್ನ ಹೃದಯಕ್ಕೆ ಹತ್ತಿರವಾದ ಕನಸು ನನಸಾಗುತ್ತಿದೆ ಎಂದು ಹೇಳಿದ್ದಾರೆ. ರಾಮನ ಆದರ್ಶಗಳನ್ನು ಅವನ ಸದ್ಗುಣಗಳನ್ನು ಅಳವಡಿಸಿಕೊಳ್ಳುವುದಕ್ಕೆ,  ಸಂಪತ್ಭರಿತ ಭಾರತಕ್ಕೆ ಮಂದಿರ ಪ್ರೇರಣೆ ನೀಡಲಿದೆ ಎಂಬುದು ನನ್ನ ನಂಬಿಕೆ ಎಂದು ಎಲ್ ಕೆ ಅಡ್ವಾಣಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT