ಸುಶಾಂತ್ ಸಿಂಗ್ ಪ್ರಕರಣ; ಹಣವರ್ಗಾವಣೆ ಕುರಿತ ತನಿಖೆಗಾಗಿ ರೆಹಾ ಚಕ್ರಬೋರ್ತಿಗೆ ಇಡಿ ಸಮನ್ಸ್ 
ದೇಶ

ಸುಶಾಂತ್ ಸಿಂಗ್ ಪ್ರಕರಣ: ಹಣ ವರ್ಗಾವಣೆ ಕುರಿತ ತನಿಖೆಗಾಗಿ ರೆಹಾ ಚಕ್ರಬೋರ್ತಿಗೆ ಇಡಿ ಸಮನ್ಸ್

ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣದಲ್ಲಿ ಹಣ ವರ್ಗಾವಣೆಗೆ ಸಂಬಂಧಿಸಿದ ತನಿಖೆಗಾಗಿ ರೆಹಾ ಚಕ್ರಬೋರ್ತಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. 

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣದಲ್ಲಿ ಹಣ ವರ್ಗಾವಣೆಗೆ ಸಂಬಂಧಿಸಿದ ತನಿಖೆಗಾಗಿ ರೆಹಾ ಚಕ್ರಬೋರ್ತಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. 

ಹಣವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳುವುದಕ್ಕೆ ಮುಂಬೈ ನಲ್ಲಿರುವ ಕಚೇರಿಗೆ ಖುದ್ದಾಗಿ ಹಾಜರಾಗಬೇಕೆಂದು ಎಂದು ತಿಳಿಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇದಕ್ಕೂ ಮುನ್ನ ಸುಶಾಂತ್ ನ ಮನೆಯ ಮ್ಯಾನೇಜರ್ ಸ್ಯಾಮ್ಯುಯಲ್ ಮಿರಂಡಾ ಅವರನ್ನು ವಿಚಾರಣೆ ನಡೆಸಿದ್ದರು. ಇ.ಡಿ ವಿಚಾರಣೆ ಮಾಡುತ್ತಿರುವ ಮೂರನೇ ವ್ಯಕ್ತಿ ಈತನಾಗಿದ್ದಾರೆ. 

ಮಂಗಳವಾರ ರೆಹಾ ಚಕ್ರಬೋರ್ತಿ ಅವರ ಸಿಎ ರಿತೇಶ್ ಷಾ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಸೋಮವಾರ ಸುಶಾಂತ್ ಸಿಂಗ್ ನ ಸಿಎ ಸಂದೀಪ್ ಶ್ರೀಧರ್ ಅವರನ್ನೂ ವಿಚಾರಣೆಗೊಳಪಡಿಸಲಾಗಿತ್ತು.

15 ಕೋಟಿ ರೂಪಾಯಿ ಹಣದ ವಹಿವಾಟು ಹಾಗೂ ಸುಶಾಂತ್ ಸಿಂಗ್ ನ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸುತ್ತಿದೆ. ಸುಶಾಂತ್ ಸಿಂಗ್ ನ ತಂದೆ ಕೆಕೆ ಸಿಂಗ್ ಪಾಟ್ನಾದಲ್ಲಿ ರೆಹಾ ಚಕ್ರಬೋರ್ತಿ ವಿರುದ್ಧ ದೂರು ದಾಖಲಿಸಿ, ತಮ್ಮ ಮಗನಿಗೆ ಈಕೆ ಮೋಸ ಮಾಡಿ ವಂಚಿಸುತ್ತಿದ್ದಲ್ಲದೇ ತಮ್ಮ ಕುಟುಂಬದಿಂದಲೂ ಮಗನನ್ನು ದೂರ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಆಧಾರದಲ್ಲಿ ಇ.ಡಿ ತನಿಖೆ ಕೈಗೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

ಜೈಪುರ ಮಹಿಳೆ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ತಾಯಿಗೂ ಮೊದಲೇ ತಂದೆಯನ್ನೂ ಕೊಂದಿದ್ದಳೇ ಹಂತಕ ಪುತ್ರಿ? ಸೋದರಮಾವ ಹೇಳಿದ್ದೇನು?

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!