ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ಹೇಳಿಕೆ: ಆಂತರಿಕ ವಿಷಯದಲ್ಲಿ ಮಾತನಾಡದಂತೆ ಭಾರತದ ಎಚ್ಚರಿಕೆ 
ದೇಶ

ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ಹೇಳಿಕೆ: ಆಂತರಿಕ ವಿಷಯದಲ್ಲಿ ಮಾತನಾಡದಂತೆ ಭಾರತದ ಎಚ್ಚರಿಕೆ 

ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ. 

ನವದೆಹಲಿ: ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ. 

ಚೀನಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅನುರಾಗ್ ಶ್ರೀವಾಸ್ತವ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದೇ ಇರುವಂತೆ ಚೀನಾಗೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ. 

ಜಮ್ಮು-ಕಾಶ್ಮೀರದ ಬಗ್ಗೆ ಚೀನಾದ ಹೇಳಿಕೆಗಳನ್ನು ಗಮನಿಸಿದ್ದೇವೆ, ಈ ವಿಚಾರವಾಗಿ ಮಾತನಾಡುವುದಕ್ಕೆ ಚೀನಾಗೆ ಮಾನ್ಯತೆ ಇಲ್ಲ. ಬೇರೆ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಮಾತನಾಡದಂತೆ ಚೀನಾಗೆ ಸಲಹೆ ನೀಡುತ್ತಿದ್ದೇವೆ ಎಂದು ಶ್ರೀವಾಸ್ತವ ತಿಳಿಸಿದ್ದಾರೆ.

ಪಾಕಿಸ್ತಾನದ ಪ್ರತಿನಿಧಿ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ, ವಿಭಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ,  ಜಮ್ಮು-ಕಾಶ್ಮೀರದ ವಿಚಾರದಲ್ಲಿ ಏಕಪಕ್ಷೀಯ ಹಾಗೂ ಯಥಾಸ್ಥಿತಿಯ ಬದಲಾವಣೆ ಕಾನೂನಿಗೆ ವಿರುದ್ಧ ಹಾಗೂ ಅಮಾನ್ಯ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಪ್ರತಿಕ್ರಿಯೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT