ರಾಮನಾಥ್ ಕೋವಿಂದ್ (ಸಂಗ್ರಹ ಚಿತ್ರ) 
ದೇಶ

ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್

ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ನವದೆಹಲಿ: ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ರಾಮಮಂದಿರಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ರಾಮಮಂದಿರ ಭವ್ಯ ದೇಗುಲ ನಿರ್ಮಾಣದ ಉದ್ಘಾಟನೆ ಮಾಡಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ತಿಳಿಸುತ್ತೇನೆ. ರಾಮಮಂದಿರ ಭವ್ಯ ದೇಗುಲವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ ಎಂದು ನಾನು ನಂಬುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. 

'ಅಯೋಧ್ಯೆಯ ರಾಮ ದೇವಾಲಯದ ಅಡಿಪಾಯ ಹಾಕಿದ್ದಕ್ಕಾಗಿ ಎಲ್ಲರಿಗೂ ಶುಭಾಶಯಗಳು. ಭವ್ಯ ದೇಗುಲ ಕಾನೂನಿನಡಿಯಲ್ಲೇ ನಿರ್ಮಿಸಲಾಗುತ್ತಿರುವುದರಿಂದ, ಇದು ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಜನರ ಉತ್ಸಾಹವನ್ನು ವ್ಯಾಖ್ಯಾನಿಸುತ್ತದೆ. ಇದು ರಾಮರಾಜ್ಯದ ಆದರ್ಶಗಳಿಗೆ ಸಾಕ್ಷಿಯಾಗಲಿದೆ ಮತ್ತು ಆಧುನಿಕ ಭಾರತದ ಸಂಕೇತವಾಗಲಿದೆ ಎಂದು ಕೋವಿಂದ್  ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT