ರಾಮನಾಥ್ ಕೋವಿಂದ್ (ಸಂಗ್ರಹ ಚಿತ್ರ) 
ದೇಶ

ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್

ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ನವದೆಹಲಿ: ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ರಾಮಮಂದಿರಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ರಾಮಮಂದಿರ ಭವ್ಯ ದೇಗುಲ ನಿರ್ಮಾಣದ ಉದ್ಘಾಟನೆ ಮಾಡಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ತಿಳಿಸುತ್ತೇನೆ. ರಾಮಮಂದಿರ ಭವ್ಯ ದೇಗುಲವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ ಎಂದು ನಾನು ನಂಬುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. 

'ಅಯೋಧ್ಯೆಯ ರಾಮ ದೇವಾಲಯದ ಅಡಿಪಾಯ ಹಾಕಿದ್ದಕ್ಕಾಗಿ ಎಲ್ಲರಿಗೂ ಶುಭಾಶಯಗಳು. ಭವ್ಯ ದೇಗುಲ ಕಾನೂನಿನಡಿಯಲ್ಲೇ ನಿರ್ಮಿಸಲಾಗುತ್ತಿರುವುದರಿಂದ, ಇದು ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಜನರ ಉತ್ಸಾಹವನ್ನು ವ್ಯಾಖ್ಯಾನಿಸುತ್ತದೆ. ಇದು ರಾಮರಾಜ್ಯದ ಆದರ್ಶಗಳಿಗೆ ಸಾಕ್ಷಿಯಾಗಲಿದೆ ಮತ್ತು ಆಧುನಿಕ ಭಾರತದ ಸಂಕೇತವಾಗಲಿದೆ ಎಂದು ಕೋವಿಂದ್  ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT