ಸಾಂದರ್ಭಿಕ ಚಿತ್ರ 
ದೇಶ

ಕರ ಸೇವಕರ ತ್ಯಾಗ-ಬಲಿದಾನ ಮರೆತುಬಿಡುವವರು 'ರಾಮ ದ್ರೋಹಿಗಳು'!

ಅಯೋಧ್ಯೆಯಲ್ಲಿ ನಡೆಯುತ್ತಿರುವ ಭೂಮಿ ಪೂಜೆ ಸಮಯದಲ್ಲಿ ಕರ ಸೇವಕರನ್ನು ಮರೆತು ಬಿಡುವವರು ರಾಮ ದ್ರೋಹಿಗಳು ಎಂದು ಶಿವಸೇನೆ ಕಿಡಿಕಾರಿದೆ.

ಮುಂಬಯಿ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಭೂಮಿ ಪೂಜೆ ಸಮಯದಲ್ಲಿ ಕರ ಸೇವಕರನ್ನು ಮರೆತು ಬಿಡುವವರು ರಾಮ ದ್ರೋಹಿಗಳು ಎಂದು ಶಿವಸೇನೆ ಕಿಡಿಕಾರಿದೆ.

ಅಯೋಧ್ಯೆಯಲ್ಲಿ  ಭೂಮಿ ಪೂಜೆ ಇಡೀ ದೇಶಕ್ಕೆ ಮತ್ತು ಎಲ್ಲಾ ಹಿಂದೂಗಳಾದ್ದಾಗಿದೆ.ಮಂದಿರ ನಿರ್ಮಾಣದ ಕ್ರೆಡಿಟ್ ಅನ್ನು ಯಾರೊಬ್ಬರು ಪಡೆಯಬಾರದು ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿದೆ.

ಭೂಮಿ ಪೂಜೆಯಲ್ಲಿ ವ್ಯಕ್ತಿ ಕೇಂದ್ರಿತ ಮತ್ತು ರಾಜಕೀಯ ಪಕ್ಷ ಕೇಂದ್ರಿತವಾಗಿದೆ ಎಂದು ಹೇಳಿದೆ. ರಾಮ ದೇವಾಲಯವನ್ನು ನಿರ್ಮಿಸುವ ಮಣ್ಣಿನಲ್ಲಿ ಕರ ಸೇವಕರ' ತ್ಯಾಗದ ವಾಸನೆ ಇದೆ, ಕರ ಸೇವಕರ ತ್ಯಾಗವನ್ನು ಮರೆತು ಬಿಡುವವರು ರಾಮ ದ್ರೋಹಿಗಳು ಎಂದು ಶಿವಸೇನೆ ಆರೋಪಿಸಿದೆ.

1992 ರಲ್ಲಿ ಕರ ಸೇವಕರು ಅಯೋಧ್ಯೆಯಲ್ಲಿ ಮಸೀದಿಯನ್ನು ಧ್ವಂಸಗೊಳಿಸಿದರು. ಹಾಗೂ ಅದೇ ಜಾಗದಲ್ಲಿ ಪ್ರಾಚೀನ ರಾಮಮಂದಿರ ನಿರ್ಮಿಸುವುದಾಗಿ ಘೋಷಿಸಿದ್ದರು.

ಇನ್ನೂ ಬಾಬ್ರಿ ಮಸೀದಿ ಕೆಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಿವಸೇನೆಗೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಪತ್ರಿಕೆ ತಿಳಿಸಿದೆ.

ಮೋದಿ ಆಡಳಿತಾವಧಿಯಲ್ಲಿ ರಾಮಮಂದಿರ ಕಾನೂನಾತ್ಮಕ ವಿಷಯ ಬಗೆಹರಿದಿದೆ, ಇಲ್ಲದಿದ್ದರೇ ಗಗೊಯಿ ಅವರು ರಾಜ್ಯಸಭಾ ಸದಸ್ಯರಾಗುತ್ತಿರಲಿಲ್ಲ ಎಂದು ಟೀಕಿಸಿದೆ.

ಬುಧವಾರ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ, ಇದಾದ ನಂತರ ರಾಮಮಂದಿರ ಸಂಬಂಧಿತ ಎಲ್ಲಾ ರಾಜಕೀಯಗಳು ಕೊನೆ ಗೊಳ್ಳಬೇಕು ಎಂದು ಅಭಿಪ್ರಾಯ ಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ನೇಪಾಳ ಪ್ರವಾಹ: ಲೈಕ್ಸ್ ಗಾಗಿ ನಕಲಿ ವಿಡಿಯೋ, ಸುಳ್ಳು ಮಾಹಿತಿ ಪ್ರಸಾರ; 72 ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ!