ಸಾಂದರ್ಭಿಕ ಚಿತ್ರ 
ದೇಶ

ಕರ ಸೇವಕರ ತ್ಯಾಗ-ಬಲಿದಾನ ಮರೆತುಬಿಡುವವರು 'ರಾಮ ದ್ರೋಹಿಗಳು'!

ಅಯೋಧ್ಯೆಯಲ್ಲಿ ನಡೆಯುತ್ತಿರುವ ಭೂಮಿ ಪೂಜೆ ಸಮಯದಲ್ಲಿ ಕರ ಸೇವಕರನ್ನು ಮರೆತು ಬಿಡುವವರು ರಾಮ ದ್ರೋಹಿಗಳು ಎಂದು ಶಿವಸೇನೆ ಕಿಡಿಕಾರಿದೆ.

ಮುಂಬಯಿ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಭೂಮಿ ಪೂಜೆ ಸಮಯದಲ್ಲಿ ಕರ ಸೇವಕರನ್ನು ಮರೆತು ಬಿಡುವವರು ರಾಮ ದ್ರೋಹಿಗಳು ಎಂದು ಶಿವಸೇನೆ ಕಿಡಿಕಾರಿದೆ.

ಅಯೋಧ್ಯೆಯಲ್ಲಿ  ಭೂಮಿ ಪೂಜೆ ಇಡೀ ದೇಶಕ್ಕೆ ಮತ್ತು ಎಲ್ಲಾ ಹಿಂದೂಗಳಾದ್ದಾಗಿದೆ.ಮಂದಿರ ನಿರ್ಮಾಣದ ಕ್ರೆಡಿಟ್ ಅನ್ನು ಯಾರೊಬ್ಬರು ಪಡೆಯಬಾರದು ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿದೆ.

ಭೂಮಿ ಪೂಜೆಯಲ್ಲಿ ವ್ಯಕ್ತಿ ಕೇಂದ್ರಿತ ಮತ್ತು ರಾಜಕೀಯ ಪಕ್ಷ ಕೇಂದ್ರಿತವಾಗಿದೆ ಎಂದು ಹೇಳಿದೆ. ರಾಮ ದೇವಾಲಯವನ್ನು ನಿರ್ಮಿಸುವ ಮಣ್ಣಿನಲ್ಲಿ ಕರ ಸೇವಕರ' ತ್ಯಾಗದ ವಾಸನೆ ಇದೆ, ಕರ ಸೇವಕರ ತ್ಯಾಗವನ್ನು ಮರೆತು ಬಿಡುವವರು ರಾಮ ದ್ರೋಹಿಗಳು ಎಂದು ಶಿವಸೇನೆ ಆರೋಪಿಸಿದೆ.

1992 ರಲ್ಲಿ ಕರ ಸೇವಕರು ಅಯೋಧ್ಯೆಯಲ್ಲಿ ಮಸೀದಿಯನ್ನು ಧ್ವಂಸಗೊಳಿಸಿದರು. ಹಾಗೂ ಅದೇ ಜಾಗದಲ್ಲಿ ಪ್ರಾಚೀನ ರಾಮಮಂದಿರ ನಿರ್ಮಿಸುವುದಾಗಿ ಘೋಷಿಸಿದ್ದರು.

ಇನ್ನೂ ಬಾಬ್ರಿ ಮಸೀದಿ ಕೆಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಿವಸೇನೆಗೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಪತ್ರಿಕೆ ತಿಳಿಸಿದೆ.

ಮೋದಿ ಆಡಳಿತಾವಧಿಯಲ್ಲಿ ರಾಮಮಂದಿರ ಕಾನೂನಾತ್ಮಕ ವಿಷಯ ಬಗೆಹರಿದಿದೆ, ಇಲ್ಲದಿದ್ದರೇ ಗಗೊಯಿ ಅವರು ರಾಜ್ಯಸಭಾ ಸದಸ್ಯರಾಗುತ್ತಿರಲಿಲ್ಲ ಎಂದು ಟೀಕಿಸಿದೆ.

ಬುಧವಾರ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ, ಇದಾದ ನಂತರ ರಾಮಮಂದಿರ ಸಂಬಂಧಿತ ಎಲ್ಲಾ ರಾಜಕೀಯಗಳು ಕೊನೆ ಗೊಳ್ಳಬೇಕು ಎಂದು ಅಭಿಪ್ರಾಯ ಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT