ಆಸ್ಪತ್ರೆಯ ಆವರಣದಲ್ಲಿ ಕಂಡು ಬಂದ ದೃಶ್ಯ 
ದೇಶ

ಅಹಮದಾಬಾದ್ ಶ್ರೇಯ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಅಹಮದಾಬಾದ್'ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಅಹಮದಾಬಾದ್: ಅಹಮದಾಬಾದ್'ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಬಳಿಕ ಆಸ್ಪತ್ರೆಯಲ್ಲಿದ್ದ 35 ಮಂದಿ ರೋಗಿಗಳನ್ನು ಸ್ಥಳಾಂತರಿಸುವಲ್ಲಿ ಆಡಳಿತ ಮಂಡಳಿ ಯಶಸ್ವಿಯಾಗಿದೆ. 

ಆಸ್ಪತ್ರೆಯ ಇಂಟೆನ್ಸಿವ್ ಕೇರ್ ಯುನಿಟ್ (ಐಸಿಯು)ವಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಗಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಅದಾಗ್ಯೂ 8 ಮಂದಿ ರೋಗಿಗಳು ಸಜೀವ ದಹನಗೊಂಡಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಶ್ರೇಯ್ ಆಸ್ಪತ್ರೆಯನ್ನು ಕೋವಿಡ್ 19 ಚಿಕಿತ್ಸಾ ಕೇಂದ್ರವಾಗಿ ಮಾರ್ಪಡಿಸಲಾಗಿತ್ತು, ಅಗ್ನಿ ದುರಂತಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ತನಿಖೆಗೆ ಸಿಎಂ ವಿಜಯ್ ರುಪಾನಿ ಆದೇಶ
ಈ ನಡುವೆ ದುರ್ಘಟನೆಗೆ ಸಂಬಂಧಿಸಿದಂತೆ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರು ತನಿಖೆಗೆ ಆದೇಶಿಸಿದ್ದಾರೆ. 

ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಂಗೀತಾ ಸಿಂಗ್ ಅವರು ತನಿಖೆಯ ನೇತೃತ್ವ ವಹಿಸಲಿದ್ದು, ಮೂರು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಮೃತರ ಕುಟುಂಬಕ್ಕೆ ರೂ.4 ಲಕ್ಷ ಪರಿಹಾರ ಘೋಷಿಸಿದ ಸಿಎಂ ವಿಜಯ್ ರುಪಾನಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರಿಹಾರ ಘೋಷಣೆ ಮಾಡಿದ ಬೆನ್ನಲ್ಲೇ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರೂ ಕೂಡ ಮೃತರ ಕುಟುಂಬಕ್ಕೆ ರೂ.4 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ವಿಜಯ್ ರುಪಾನಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT