ದೇಶ

ಅಹ್ಮದಾಬಾದ್ ಕೋವಿಡ್-19 ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ

Manjula VN

ನವದೆಹಲಿ: ಅಹ್ಮದಾಬಾದ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ರೂ.2ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಟಿರುವ ಅವರು, ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ, ಘಟನೆ ಕುರಿತು ಮುಖ್ಯಮಂತ್ರಿಗಳು ಹಾಗೂ ಮೇಯರ್ ಜೊತೆಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದವರಿಗೆ ಅಗತ್ಯ ಸಹಾಯಗಳನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಅಲ್ಲದೆ, ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಣೆ ಮಾಡಿದ್ದಾರೆ. 

SCROLL FOR NEXT