ಭಾರತ-ಚೀನಾ ಧ್ವಜಗಳು 
ದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸುವ ಚೀನಾ ಪ್ರಯತ್ನ: ಸ್ಪಷ್ಟವಾಗಿ ತಿರಸ್ಕರಿಸಿದ ಭಾರತ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸುವ ಚೀನಾದ ಪ್ರಯತ್ನಕ್ಕೆ ಭಾರತ ಗುರುವಾರ ತಿರುಗೇಟು ನೀಡಿದ್ದು ದೇಶದ ಆಂತರಿಕ ವ್ಯವಹಾರಗಳಲ್ಲಿ ಚೀನಾದ ಮಧ್ಯ ಪ್ರವೇಶವನ್ನು ದೃಢವಾಗಿ ತಿರಸ್ಕರಿಸುವುದಾಗಿ ಹೇಳಿದೆ.

ನವದೆಹಲಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸುವ ಚೀನಾದ ಪ್ರಯತ್ನಕ್ಕೆ ಭಾರತ ಗುರುವಾರ ತಿರುಗೇಟು ನೀಡಿದ್ದು ದೇಶದ ಆಂತರಿಕ ವ್ಯವಹಾರಗಳಲ್ಲಿ ಚೀನಾದ ಮಧ್ಯ ಪ್ರವೇಶವನ್ನು ದೃಢವಾಗಿ ತಿರಸ್ಕರಿಸುವುದಾಗಿ ಹೇಳಿದೆ.

ಜಮ್ಮು-ಕಾಶ್ಮೀರ ವಿವಾದ ಕುರಿತಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಚೀನಾ ಚರ್ಚೆ ಆರಂಭಿಸಿದೆ ಎಂದು ತಿಳಿದುಬಂದಿದೆ. ಭಾರತದ ಆಂತರಿಕ ವಿಚಾರವಾಗಿರುವ ಜಮ್ಮು-ಕಾಶ್ಮೀರ ವಿವಾದದಲ್ಲಿ ಮಧ್ಯೆ ಪ್ರವೇಶಿಸುವುದು ಚೀನಾ ಇದು ಮೊದಲ ಸಲವೇನಲ್ಲ. ಈ ಹಿಂದೆ ಅದು ಮಾಡಿದ್ದ ಪ್ರಯತ್ನಕ್ಕೆ ಅಂತಾರಾಷ್ಟ್ರೀಯ ಸಮುದಾಯದಿಂದ ಬೆಂಬಲವೇನು ಸಿಕ್ಕಿಲ್ಲ. ಈ ಬಾರಿ ಸಹ ಸಿಗುವುದಿಲ್ಲ. ಅದರ ಪ್ರಯತ್ನ ಫಲಿಸದು, ಇದು ಸಂಪೂರ್ಣವಾಗಿ ಭಾರತಕ್ಕೆ ಸಂಬಂಧಿಸಿದ ವಿಷಯ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ.

ಹೀಗೆ ಪದೇ ಪದೇ ಆಂತರಿಕ ವಿಚಾರಕ್ಕೆ ಕೈಹಾಕುವ ಮೊದಲು ಚೀನಾ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲಿ ಎಂದು ವಿದೇಶಾಂಗ ಇಲಾಖೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್ ದಿಢೀರ್ ಯೂ-ಟರ್ನ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ವಿಧಿಸದಿರಲು ನಿರ್ಧಾರ..!

ಬೆಂಗಳೂರು ಪ್ರಶಸ್ತ ನಗರ, ಐಟಿ ಸಿಟಿ ಮೂಲಕ ಜಗತ್ತು ಭಾರತವನ್ನು ನೋಡುತ್ತಿದೆ: D K Shivakumar

1st T20I: ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

35 ಎಸೆತ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

SCROLL FOR NEXT