ರಾಹುಲ್ ಗಾಂಧಿ 
ದೇಶ

ಚೀನಾ ವಿಷಯದಲ್ಲಿ ಮೋದಿ ಸುಳ್ಳು ಹೇಳುತ್ತಿರುವುದೇಕೆ: ರಕ್ಷಣಾ ಸಚಿವಾಲಯದ ದಾಖಲೆ ಉಲ್ಲೇಖಿಸಿ ರಾಹುಲ್ ಪ್ರಶ್ನೆ

ಭಾರತ-ಚೀನಾ ಗಡಿ ವಿವಾದ ಕುರಿತು ಎಂದಿನಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮೇ 17-18ರಂದು ಚೀನಾ ಸೇನೆ  ಭಾರತೀಯ ಪ್ರಾಂತ್ಯಗಳ ಮೇಲೆ ಅತಿಕ್ರಮಣ ಮಾಡಿರುವ ಕುರಿತು ಪ್ರಧಾನಿ ಮೋದಿ ಸುಳ್ಳು  ಹೇಳುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ನವದೆಹಲಿ: ಭಾರತ-ಚೀನಾ ಗಡಿ ವಿವಾದ ಕುರಿತು ಎಂದಿನಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮೇ 17-18ರಂದು ಚೀನಾ ಸೇನೆ  ಭಾರತೀಯ ಪ್ರಾಂತ್ಯಗಳ ಮೇಲೆ ಅತಿಕ್ರಮಣ ಮಾಡಿರುವ ಕುರಿತು ಪ್ರಧಾನಿ ಮೋದಿ ಸುಳ್ಳು  ಹೇಳುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವಾಲಯ ಬಿಡುಗಡೆಗೊಳಿಸಿರುವ ದಾಖಲೆಗಳ ಪ್ರಕಾರ, ಮೇ 17 ಹಾಗೂ 18ರಂದೇ ಚೀನೀ ಸೇನೆ ಕುಗ್ರಾಂಗ್‌ ನಾಲಾ ಮತ್ತು ಪ್ಯಾಂಗಾಂಗ್ ತ್ಸೋನ ಉತ್ತರ ತಟದ ಪ್ರದೇಶವನ್ನು  ಅತಿಕ್ರಮಿಸಿಕೊಂಡಿದ್ದರು ಎಂಬ ವಿಷಯ ಬಹಿರಂಗಗೊಂಡಿದೆ. ಆದರೂ, ಈ ಕುರಿತು ಮೋದಿ  ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. 

ಟ್ವಿಟರ್‌ ಖಾತೆಯಲ್ಲಿ ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಕ್ಷಣಾ ಸಚಿವಾಲಯದ ದಾಖಲೆಗಳ  ವರದಿಗಳನ್ನು ಲಗತ್ತಿಸಿದ್ದಾರೆ.  ಈ ರಕ್ಷಣಾ ಸಚಿವಾಲಯದ ಅಧಿಕೃತ ದಾಖಲೆಗಳು ವಾಸ್ತವ ಗಡಿ ರೇಖೆ (ಎಲ್‌ಎಸಿ) ಹಾಗೂ ಮುಖ್ಯವಾಗಿ ಗಾಲ್ವನ್‌ ಗಣಿವೆಯಲ್ಲಿ ಮೇ 5ರಿಂದ ನಡೆದ ಘಟನೆಗಳನ್ನು ಉಲ್ಲೇಖಿಸಿವೆ.  

ಪೂರ್ವ ಲಡಾಕ್‌ನ ಗಡಿಯಲ್ಲಿ ಚೀನಾ ಕಡೆಯಿಂದ ಉದ್ಭವಿಸಿರುವ ಏಕಮುಖ ಘರ್ಷಣೆ ಇನ್ನೂ ಸೂಕ್ಷ್ಮವಾಗಿಯೇ ಮುಂದುವರಿದಿದ್ದು, ಪರಿಸ್ಥಿತಿಯ ಸೂಕ್ತ ಮೌಲ್ಯಮಾಪನ ಹಾಗೂ ಅದನ್ನು ಆಧರಿಸಿ ಸಂಪೂರ್ಣ ನಿಗಾ ವಹಿಸುವ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. 

ಈ ಪರಿಸ್ಥಿತಿ ಸುದೀರ್ಘವಾಗಿರಲಿದೆ ಎಂದು ಸಚಿವಾಲಯದ ಅಧಿಕೃತ ದಾಖಲೆಗಳು ಬಹಿರಂಗಪಡಿಸಿದೆ.ಜೂನ್‌ ತಿಂಗಳಲ್ಲಿ ನಡೆದ ಘಟನೆಗಳನ್ನು ಆಧರಿಸಿದ ಈ ವರದಿಯಲ್ಲಿ, ಮೇ 5ರಿಂದ ವಾಸ್ತವ ಗಡಿ ರೇಖೆ (ಎಲ್‌ಎಸಿ) ಮತ್ತು ವಿಶೇಷವಾಗಿ ಗಾಲ್ವಾನ್‌ ಕಣಿವೆಯಲ್ಲಿ ಚೀನಾ ಸೇನೆಯ ದಾಳಿ ನಿರಂತರವಾಗಿ ಹೆಚ್ಚುತ್ತಲೇ ಇದೆ ಎಂಬ ವಿಷಯವನ್ನು ಬಹಿರಂಗಪಡಿಸಿದೆ.

ಮೇ 17 ಹಾಗೂ 18ರಂದು ಚೀನಾ ಬದಿಯಲ್ಲಿನ ಪ್ರದೇಶಗಳಾದ ಕುಗ್ರಾಂಗ್‌ ನಾಲಾ ಮತ್ತು ಗೋಗ್ರಾ ಪ್ರದೇಶಗಳು ಮತ್ತು ಪ್ಯಾಂಗಾಂಗ್‌ ತ್ಸೋನ ಉತ್ತರ ತಟಗಳಲ್ಲಿ ಸೇನೆ ಅತಿಕ್ರಮಣ ಮಾಡಿದೆ ಎಂದು ವರದಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT