ಸುಶಾಂತ್ 
ದೇಶ

ಆಗಸ್ಟಾ, ಮಲ್ಯಾ ಲೋನ್ ಪ್ರಕರಣದ ತನಿಖೆ ನಡೆಸಿದ್ದ ತಂಡಕ್ಕೆ ಸುಶಾಂತ್ ಸಾವು ಪ್ರಕರಣ ಹಸ್ತಾಂತರ 

ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ಸಿಬಿಐ ಗೆ ವಹಿಸಲಾಗಿದ್ದು, ಆಗಸ್ಟಾ ವೆಸ್ಟ್ ಲ್ಯಾಂಡ್, ಮಲ್ಯ ಸಾಲ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಬಿಐ ನ ತಂಡಕ್ಕೇ ಈ ಪ್ರಕರಣವನ್ನೂ ವಹಿಸಲಾಗಿದೆ. 

ನವದೆಹಲಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ಸಿಬಿಐ ಗೆ ವಹಿಸಲಾಗಿದ್ದು, ಆಗಸ್ಟಾ ವೆಸ್ಟ್ ಲ್ಯಾಂಡ್, ಮಲ್ಯ ಸಾಲ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಬಿಐ ನ ತಂಡಕ್ಕೇ ಈ ಪ್ರಕರಣವನ್ನೂ ವಹಿಸಲಾಗಿದೆ. 

ಸಿಬಿಐ ತನ್ನ ಭ್ರಷ್ಟಾಚಾರ ವಿರೋಧಿ ವಿಭಾಗ VI ವಿಶೇಷ ತನಿಖಾ ತಂಡದ ಮೂಲಕ ಸುಶಾಂತ್ ಸಾವು ಪ್ರಕರಣವನ್ನು ತನಿಖೆ ನಡೆಸುತ್ತಿದೆ. ಸಿಬಿಐ ನಿರ್ದೇಶಕ ಆರ್ ಕೆ ಶುಕ್ಲಾ ಅವರನ್ನೊಳಗೊಂಡ ಸಿಬಿಐ ನ ಹಿರಿಯ ಅಧಿಕಾರಿಗಳ ತಂಡದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಬಿಹಾರ ಸರ್ಕಾರದ ಶಿಫಾರಸ್ಸಿನ ಆಧಾರದಲ್ಲಿ ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿದ್ದು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ, ಆಕೆಯ ತಂದೆ ಇಂದ್ರಜೀತ್ ಚಕ್ರವರ್ತಿ, ತಾಯಿ ಸಂಧ್ಯಾ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ, ಶೃತಿ ಮೋದಿ, ಮನೆಯ ವ್ಯವಸ್ಥಾಪಕರಾಗಿದ್ದ ಸ್ಯಾಮ್ಯುಯಲ್ ಮಿರಾಂಡ ಹಾಗೂ ಇನ್ನಿತರ ಅನಾಮಿಕರ ಹೆಸರನ್ನು ಸಿಬಿಐ ತನಿಖೆಯ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ. 

1994 ರ ಬ್ಯಾಚ್ ನ ಗುಜರಾತ್ ಕೇಡರ್ ಐಪಿಎಸ್ ಅಧಿಕಾರಿ ಜಂಟಿ ನಿರ್ದೇಶಕ ಮನೋಜ್ ಶಶಿಧರ್, ಡಿಐಜಿ ಗಗನ್ ದೀಪ್ ಗಂಭೀರ್ (ಗುಜರಾತ್ ಕೇಡರ್) ಎಸ್ ಪಿ  ನೂಪುರ್ ಪ್ರಸಾದ್ ಅವರಿರುವ ತಂಡ ಸುಶಾಂತ್ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT