ಸಾಂದರ್ಭಿಕ ಚಿತ್ರ 
ದೇಶ

ಪಾಕಿಸ್ತಾನದ ನುಸುಳುಕೋರನ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ

ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಅಕ್ರಮವಾಗಿ ನುಸುಳುತ್ತಿದ್ದ ನುಸುಳುಕೋರನನ್ನು ಗಡಿ ಭದ್ರತಾ ಪಡೆಯ ಯೋಧರು ಶುಕ್ರವಾರ ತಡರಾತ್ರಿ ಮುಂಜಾನೆ ಹೊಡೆದುರುಳಿಸಿದ್ದಾರೆ.

ನವದೆಹಲಿ: ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಅಕ್ರಮವಾಗಿ ನುಸುಳುತ್ತಿದ್ದ ನುಸುಳುಕೋರನನ್ನು ಗಡಿ ಭದ್ರತಾ ಪಡೆಯ ಯೋಧರು ಶುಕ್ರವಾರ ತಡರಾತ್ರಿ ಮುಂಜಾನೆ ಹೊಡೆದುರುಳಿಸಿದ್ದಾರೆ.

ರಾಜಸ್ಥಾನದ ಬರ್ಮೆರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಈ ಘಟನೆ ನಡೆದಿದ್ದು, ಒಳನುಸುಳಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆಯು(ಬಿಎಸ್‌ಎಫ್‌)  ಶುಕ್ರವಾರ ತಡರಾತ್ರಿ ಹತ್ಯೆ ಮಾಡಿದೆ.

‘ಅಂತಾರಾಷ್ಟ್ರೀಯ ಗಡಿ ಮೂಲಕ ಒಳನುಸುಳಲು ಯತ್ನಿಸಿದ ವ್ಯಕ್ತಿಗೆ ಬಿಎಸ್‌ಎಫ್‌ ಯೋಧರು ಎಚ್ಚರಿಕೆ ನೀಡಿದರು. ಆದರೆ, ಆತ ಗಡಿದಾಟಲು ಪ್ರಯತ್ನಿಸಿದ. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಈತನನ್ನು ಸೈನಿಕರು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶುಕ್ರವಾರ ತಡರಾತ್ರಿ 1 ಗಂಟೆ ಸುಮಾರಿಗೆ ಬಕ್ಸಾರ್‌ ಪ್ರದೇಶದ ಬಳಿ ಘಟನೆ ನಡೆದಿದ್ದು. ಈ ವೇಳೆ ಪಾಕಿಸ್ತಾನದಿಂದ 10–15 ಟಾರ್ಚ್‌ಗಳ ಬೆಳಕು ಕಾಣಿಸಿಕೊಂಡಿತ್ತು ಮತ್ತು ಶಬ್ದ ಕೇಳಿ ಬಂದಿತ್ತು. ಈ ವೇಳೆ ಸೈನಿಕರು ಎಚ್ಚರಿಕೆ ನೀಡಿದರು. ಆದರೂ ಒಳನುಸುಳುವಿಕೆ ಮುಂದುವರೆದಾಗ ಶಬ್ದ ಬಂದ ಜಾಗಕ್ಕೆ ಸೈನಿಕರು ಗುಂಡು ಹಾರಿಸಿದ್ದಾರೆ. ಈ ವೇಳೆ ಗಿಡಗಂಟೆಗಳಲ್ಲಿ ಓರ್ವ ಅವಿತುಕೊಂಡಿದ್ದ. ಕೂಡಲೇ ಸ್ಥಳಕ್ಕೆ ಸೈನಿಕರು ದೌಡಾಯಿಸಿದ ಸೈನಿಕರು ಶೋಧ ನಡೆಸಿದಾಗ ಅಲ್ಲಿ ಓರ್ವ ನುಸುಳುಕೋರನ ಶವ ಪತ್ತೆಯಾಗಿತ್ತು. 

ಪ್ರಸ್ತುತ ಶವನ್ನು ವಶಕ್ಕೆ ಪಡೆದಿರುವ ಯೋಧರು, ಘಟನಾ ಸ್ಥಳದಲ್ಲಿ ತೀವ್ರ ಶೋಧ ನಡೆಸಿದ್ದಾರೆ. ಇದೇ ಆಗಸ್ಟ್ 15ರಂದು ನಡೆಯಲಿರುವ ಸ್ವತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದಾರೆ ಎಂಬ ಎಚ್ಚರಿಕೆ ಹಿನ್ನಲೆಯಲ್ಲಿ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಇದೇ ಸಂದರ್ಭದಲ್ಲಿ ಗಡಿಯಲ್ಲೂ ಒಳ ನುಸುಳುವಿಕೆಯಂತಹ ಘಟನೆಗಳ ಹೆಚ್ಚಾಗಿ ಕಂಡಬರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT