ಏರ್ ಇಂಡಿಯಾ ವಿಮಾನದ ಅವಶೇಷ 
ದೇಶ

ಕೇರಳದಲ್ಲಿ ಏರ್ ಇಂಡಿಯಾ ದುರಂತ: ಅಪಘಾತಕ್ಕೀಡಾದ ವಿಮಾನದ ಕಪ್ಪು ಪೆಟ್ಟಿಗೆ, ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ವಶಕ್ಕೆ

ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಪಘಾತದಲ್ಲಿ ವಿಮಾನ ಎರಡು ಭಾಗವಾಗಿ ಹೋಗಿದ್ದು ಇಂದು ಅದರ ಕಪ್ಪು ಪೆಟ್ಟಿಗೆ ದೊರೆತಿದೆ(ಬ್ಲಾಕ್ ಬಾಕ್ಸ್). 

ಕೋಝಿಕ್ಕೋಡ್: ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಪಘಾತದಲ್ಲಿ ವಿಮಾನ ಎರಡು ಭಾಗವಾಗಿ ಹೋಗಿದ್ದು ಇಂದು ಅದರ ಕಪ್ಪು ಪೆಟ್ಟಿಗೆ ದೊರೆತಿದೆ(ಬ್ಲಾಕ್ ಬಾಕ್ಸ್). 

ಘಟನೆಗೆ ಸಂಬಂಧಪಟ್ಟಂತೆ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಈಗಾಗಲೇ ತನಿಖೆಗೆ ಆದೇಶ ನೀಡಿದ್ದು ಅವರು ಇಂದು ಅಪರಾಹ್ನ ಕೋಝಿಕ್ಕೋಡ್ ಗೆ ಬರುವ ನಿರೀಕ್ಷೆಯಿದೆ. ಡಿಜಿಸಿಎ, ಎಎಐಬಿ ಮತ್ತು ವಿಮಾನ ಸುರಕ್ಷತಾ ವಿಭಾಗದ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಆಗಮಿಸಿ ತನಿಖೆ ಮಾಡುತ್ತಿದ್ದಾರೆ.

ವಿಮಾನದ ದಾಖಲೆಗಳನ್ನು ಡಿಜಿಟಲ್ ಮೂಲಕ ದಾಖಲಿಸಿಕೊಳ್ಳುವ ಕಪ್ಪು ಪೆಟ್ಟಿಗೆ(ಡಿಎಫ್ ಡಿಆರ್) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್(ಸಿವಿಆರ್) ಸಿಕ್ಕಿದ್ದು, ಇವುಗಳಲ್ಲಿ ವಿಮಾನದ ದಕ್ಷತೆ, ವೇಗ, ಬ್ರೇಕಿಂಗ್, ವಿಮಾನದ ಸ್ಥಿತಿಗತಿ, ಪ್ರಯಾಣದ ವೇಳೆ ಪೈಲಟ್ ಗಳ ನಡುವೆ ನಡೆದ ಸಂಭಾಷಣೆ ದಾಖಲಾಗಿರುತ್ತದೆ.ಇವುಗಳಿಂದ ಅಪಘಾತಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ಸಹಾಯವಾಗಲಿದೆ. 

ಅಪಘಾತ ಹೇಗಾಯಿತು?: ವಿಮಾನ ಹಾರಾಟ ಪತ್ತೆಹಚ್ಚುವ ಸ್ವೀಡನ್ ನ ವೆಬ್ ಸೈಟ್ ಫ್ಲೈಟ್ ರಾಡಾರ್ 24, ವಾಣಿಜ್ಯ ವಿಮಾನಗಳ ಹಾರಾಟದ ಬಗ್ಗೆ ಮಾಹಿತಿ ನೀಡುತ್ತದೆ. ಅದು ಹೇಳುವ ಪ್ರಕಾರ ಏರ್ ಇಂಡಿಯಾ ವಿಮಾನ ನಿನ್ನೆ ಅಪಘಾತಕ್ಕೀಡಾಗುವ ಮೊದಲು ಎರಡು ಬಾರಿ ಲ್ಯಾಂಡಿಂಗ್ ಆಗಲು ಯತ್ನಿಸಿತ್ತು. ವಿರುದ್ಧ ದಿಕ್ಕಿನಿಂದ ವಿಮಾನವನ್ನು ಇಳಿಸುವ ಮೊದಲು ನಿಗದಿತ ರನ್ ವೇಯಲ್ಲಿ ಇಳಿಸಲು ಪೈಲಟ್ ಗೆ ಸಾಧ್ಯವಾಗಲಿಲ್ಲ. ಈ ಸಮಯದಲ್ಲಿ ವಿಮಾನವು ಜಾರಿ ತಿರುಗಿ ಅಪಘಾತಕ್ಕೀಡಾಗಿದೆ.ವಿಮಾನ ಬಂದಿಳಿಯುವ ಸಮಯದಲ್ಲಿ ಅಧಿಕ ಮಳೆಯಿದ್ದುದರಿಂದ ರನ್ ವೇ ಅಷ್ಟೊಂದು ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ, ಇದು ಕೂಡ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಿದೆ.  

ಕೋಝಿಕ್ಕೋಡ್ ವಿಮಾನ ನಿಲ್ದಾಣ ಪರ್ವತದ ಮೇಲೆ ನಿರ್ಮಿಸಲಾಗಿದ್ದು, ರನ್ ವೇಯ ಕೊನೆಗೆ ಅಷ್ಟೊಂದು ವಿಶಾಲವಾದ ಜಾಗವಿಲ್ಲ. ಪ್ರತಿಕೂಲ ಸನ್ನಿವೇಶ ಮತ್ತು ಕೈಕೊಟ್ಟ ಹವಾಮಾನ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕೇರಳ ರಾಜ್ಯದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಕೋಝಿಕ್ಕೋಡ್ ಕೂಡ ಒಂದಾಗಿದ್ದು, ಇಲ್ಲಿಂದ ಹಲವು ಅಂತಾರಾಷ್ಟ್ರೀಯ ವಿಮಾನಗಳು ಹಾರಾಡುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT