ದುರಂತಕ್ಕೀಡಾದ ವಿಮಾನ 
ದೇಶ

ನೋವಿನಿಂದ ಅಳುತ್ತಿದ್ದರು, ಮಕ್ಕಳು ಪೋಷಕರಿಗಾಗಿ ಹುಡುಕುತ್ತಿದ್ದರು: ವಿಮಾನ ದುರಂತದ ಕರುಳು ಹಿಂಡುವ ದೃಶ್ಯ...

ಗಾಯಗೊಂಡವರು ನೋವಿನಿಂದ ನರಳುತ್ತಾ ಬೊಬ್ಬಿಡುತ್ತಿರುವುದು, ಮಕ್ಕಳು ತಮ್ಮ ಪೋಷಕರಿಗಾಗಿ ಹುಡುಕಾಡುತ್ತಿರುವುದು, ಇನ್ನು ಕೆಲವರು ತಾವು ಹೇಗೆ ಹಠಾತ್ತನೆ ಬಿದ್ದೆವು, ಏನಾಯಿತು ಎಂದು ಆಘಾತದಿಂದ ನೋಡುತ್ತಿರುವ ದೃಶ್ಯ ಎಂತವರ ಕರುಳನ್ನು ಚುರುಕ್ ಅನಿಸದಿರದು. 

ಕೋಝಿಕ್ಕೋಡ್: ಗಾಯಗೊಂಡವರು ನೋವಿನಿಂದ ನರಳುತ್ತಾ ಬೊಬ್ಬಿಡುತ್ತಿರುವುದು, ಮಕ್ಕಳು ತಮ್ಮ ಪೋಷಕರಿಗಾಗಿ ಹುಡುಕಾಡುತ್ತಿರುವುದು, ಇನ್ನು ಕೆಲವರು ತಾವು ಹೇಗೆ ಹಠಾತ್ತನೆ ಬಿದ್ದೆವು, ಏನಾಯಿತು ಎಂದು ಆಘಾತದಿಂದ ನೋಡುತ್ತಿರುವ ದೃಶ್ಯ ಎಂತವರ ಕರುಳನ್ನು ಚುರುಕ್ ಅನಿಸದಿರದು. 

ಇದು ನಿನ್ನೆ ರಾತ್ರಿ ಕೋಝಿಕ್ಕೋಡ್ ನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆ್ಸ್ ವಿಮಾನ ದುರಂತದಲ್ಲಿ ಬದುಕುಳಿದವರು, ಗಾಯಗೊಂಡವರನ್ನು ವೀಲ್ ಚೇರ್, ಸ್ಟ್ರೆಚರ್ ನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಸಾಗಿಸುತ್ತಿರುವಾಗ ಕಂಡುಬಂದ ದೃಶ್ಯ. 

ಕಲ್ಲಿಕೋಟೆ ವಿಮಾನ ನಿಲ್ದಾಣಕ್ಕೆಸಾಯಂಕಾಲ 7.40ಕ್ಕೆ ದುಬೈಯಿಂದ 190ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತು ತಂಡ ಏರ್ ಇಂಡಿಯಾ ವಿಮಾನ ರನ್ ವೇಯಲ್ಲಿ ಜಾರಿ 50 ಅಡಿ ಆಳದ ಕಂದಕಕ್ಕೆ ಅಪ್ಪಳಿಸಿ ಎರಡು ಹೋಳಾಯಿತು, ಪೈಲಟ್ ಸಾಧ್ಯವಾದಷ್ಟು ಅಪಘಾತ ತಪ್ಪಿಸಲು ಯತ್ನಿಸಿದ್ದರು. ಅವರ ಸಮಯ ಪ್ರಜ್ಞೆಯಿಂದಾಗಿ ವಿಮಾನ ಹೊತ್ತಿ ಉರಿಯುವುದು ತಪ್ಪಿಹೋಗಿತ್ತು. ಇದರಿಂದ ಹಲವು ಜೀವಗಳು ಉಳಿಯಿತು. 

ಆರಂಭದಲ್ಲಿ ನಾವು ಸಣ್ಣ ಅಪಘಾತ ಅಂದುಕೊಂಡೆವು. ಆಂಬ್ಯುಲೆನ್ಸ್ ನಲ್ಲಿ ಗಾಯಾಳುಗಳನ್ನು ಕರೆತರುತ್ತಲೇ ಇದ್ದರು. ಇಲ್ಲಿ 24 ಮಂದಿ ದಾಖಲಾಗಿದ್ದು ಅವರಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಪಘಾತ ವಿಭಾಗದ ವೈದ್ಯರೊಬ್ಬರು ತಿಳಿಸಿದ್ದಾರೆ.

ಏನಾಯಿತು ಎಂದು ತಿಳಿದುಕೊಳ್ಳಲು ಸಮಯವಿರಲಿಲ್ಲ, ಕೆಲವು ಮಕ್ಕಳು ಜೋರಾಗಿ ಅಳುತ್ತಿದ್ದರು. ಇನ್ನು ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದರು ಎಂದು ಬೇಬಿ ಸ್ಮಾರಕ ಆಸ್ಪತ್ರೆಯ ಮುಖ್ಯ ಮಾರುಕಟ್ಟೆ ಅಧಿಕಾರಿ ಸುರೇಶ್ ತಂಪಿ ಹೇಳುತ್ತಾರೆ. 

ಅಪಘಾತದಲ್ಲಿ ಮೃತಪಟ್ಟ ಪೈಲಟ್ ಕಮಾಂಡರ್ ದೀಪಕ್ ವಸಂತ್ ಸಾಠೆ ಮತ್ತು ಕ್ಯಾಪ್ಟನ್ ಅಖಿಲೇಶ್ ಕುಮಾರ್ ಅವರ ಮೃತದೇಹಗಳನ್ನು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಈ ಆಸ್ಪತ್ರೆಯಲ್ಲಿ 33 ಮಂದಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಗಾಯಾಳುಗಳನ್ನು ಬೀಚ್, ಮೈತ್ರ, ಇಖ್ರಾ, ಆಸ್ಟರ್ ಪಂತೀರಂಕವು ಮತ್ತು ರೆಡ್ ಕ್ರೆಸೆಂಟ್ ಫೆರೊಕ್ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT