ಮುನ್ನಾರ್ ಭೂ ಕುಸಿತ 
ದೇಶ

ಮುನ್ನಾರ್ ಭೂ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ಕೇಂದ್ರ, ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ.

ತಿರುವನಂತಪುರಂ: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ.

ಭಾರೀ ಮಳೆಯಿಂದ ಕೆರಳದ ಇಡುಕ್ಕಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇದೀಗ 24ಕ್ಕೇರಿದ್ದು,  ಮೃತರ ಕುಟುಂಬಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರಿಹಾರ ಘೋಷಿಸಿದ್ದು, ಈ ಕುರಿತು ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. 

'ಜೀವಗಳನ್ನು ಕಳೆದುಕೊಂಡಿರುವುದು ತುಂಬಾ ನೋವಾಗಿದೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಲಾಗಿದ್ದು, ಸಾವನ್ನಪ್ಪಿದವರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ.ಘೋಷಿಸಲಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಮುನ್ನಾರ್ ನಿಂದ 25 ಕಿ.ಮೀ.ದೂರದಲ್ಲಿರುವ ರಾಜಾಮಲೈ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದು, ಸುಮಾರು 80 ಜನ ಈ ಪ್ರದೇಶದಲ್ಲಿ ವಾಸವಿದ್ದರು. ಮಣ್ಣಿನಡಿ ಎಷ್ಟು ಜನ ಸಿಲುಕಿದ್ದಾರೆ ಎಂಬ ಕುರಿತು ಖಚಿತ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಅಂತೆಯೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿರುವ ವಿಜಯನ್ ಅವರು, 'ಅಗ್ನಿಶಾಮಕ ದಳದ 50 ಸದಸ್ಯರ ವಿಶೇಷ ಕಾರ್ಯಪಡೆಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ರಾತ್ರಿ ಕೆಲಸ ಮಾಡಲು ಸಹ ಇವರ ಬಳಿ ಸಲಕರಣೆಗಳಿವೆ. ಇದರೊಂದಿಗೆ ತುರ್ತು ಸೇವೆಗಳ ಸಿಬ್ಬಂದಿಯನ್ನು ಸಹ ಕಳುಹಿಸಲಾಗಿದೆ. ಅಲ್ಲದೆ ಪರಿಹಾರ ಕಾರ್ಯಕ್ಕಾಗಿ ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್ ಗಳ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಗಾಯಗೊಂಡವರನ್ನು ಮುನ್ನಾರ್ ನ ಟಾಟಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT