ಹಲ್ಲೆಗೊಳಗಾದ ಮುಸ್ಲಿಂ ಆಟೋ ಚಾಲಕ 
ದೇಶ

ಜೈ ಶ್ರೀರಾಮ್ ಎನ್ನದ ಮುಸ್ಲಿಂ ಆಟೋ ಚಾಲಕನನ್ನು ಥಳಿಸಿ, ಹಲ್ಲು ಮುರಿದ ದುಷ್ಕರ್ಮಿಗಳು

ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ  ನಡೆದಿದೆ.

ಜೈಪುರ: ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ  ನಡೆದಿದೆ.

ದುಷ್ಕರ್ಮಿಗಳು ಚಾಲಕನ ಗಡ್ಡವನ್ನು ಎಳೆದು, ಮುಖಕ್ಕೆ ಹೊಡೆದಿದ್ದಾರೆ. ಹಲ್ಲುಗಳು ಹೊರಗೆ ಬರುವಂತೆ ಹಲ್ಲೆ ನಡೆಸಲಾಗಿದೆ. ಪಾಕಿಸ್ತಾನಕ್ಕೆ ಹೋಗುವಂತೆ ಪೀಡಿಸಲಾಗಿದೆ. ಹಲ್ಲೆಯ ನಂತರ 52 ವರ್ಷದ ಗಫಾರ್ ಅಹ್ಮದ್ ಅವರ ಕಣ್ಣು ಮತ್ತು ಕೆನ್ನೆಗಳು ಉಬ್ಬಿಕೊಂಡಿವೆ.

ಕೆಲ ಪ್ರಯಾಣಿಕರನ್ನು ರೈಲು ನಿಲ್ದಾಣಕ್ಕೆ ತಲುಪಿಸಿ ಮರಳುವಾಗ ಈ ಘಟನೆ ನಡೆದಿದೆ. ಹಲ್ಲೆ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಲ್ಲೆಗೊಳಗಾದ ವ್ಯಕ್ತಿ ಗಫಾರ್ ಅಹ್ಮದ್ ತಿಳಿಸಿದ್ದಾರೆ.

ಕೆಲ ಪ್ರಯಾಣಿಕರನ್ನು ರೈಲು ನಿಲ್ದಾಣಕ್ಕೆ ತಲುಪಿಸಿ ಮರಳುತ್ತಿರುವಾಗ ತಮ್ಮನ್ನು ತಡೆದ ವ್ಯಕ್ತಿಗಳು ತಂಬಾಕು ಕೇಳಿದ್ದಾರೆ. ಅದನ್ನು ಕೊಟ್ಟಾಗ ಮೋದಿ ಜಿಂದಾಬಾದ್ ಎಂದು ಹೇಳುವಂತೆ ಸೂಚಿಸಿದ್ದಾರೆ. ಅದನ್ನು ಹೇಳದಿದ್ದಾಗ ಕಪ್ಪಾಳಕ್ಕೆ ಹೊಡೆದಿದ್ದು, ಜೈ ಶ್ರೀರಾಮ್ ಎನ್ನುವಂತೆ ಪೀಡಿಸಿದ್ದಾರೆ. ಇದಕ್ಕೂ ಒಪ್ಪದಿದ್ದಾಗ ಬರ್ಬರ ರೀತಿಯಲ್ಲಿ ಹಲ್ಲೆ ನಡೆಸಲಾಗಿದೆ. 2-3 ಹಲ್ಲುಗಳು ಕಿತ್ತು ಬಂದಿವೆ. ಎಡಕಣ್ಣಿಗೂ ತೀವ್ರ ರೀತಿಯ ಗಾಯವಾಗಿದೆ. ಕೆಲ ಕಾಲ ಪ್ರಜ್ಞೆ ಹೀನನಾಗಿ ಬಿದಿದ್ದು, ನಂತರ ಮನೆಗೆ ವಾಪಸ್ಸಾಗಿರುವುದಾಗಿ
ಅವರು ಎಫ್ ಐಆರ್ ನಲ್ಲಿ ಉಲ್ಲೇಖಿಸಿದ್ದಾರೆ.

ಐಪಿಸಿ ಸೆಕ್ಷನ್ 323, 341, 295ಎ, 504, 506, 327, 382 ಮತ್ತು 34ರ ಅಡಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಫ್ ಐಆರ್ ದಾಖಲಿಸಿದ ಬಳಿಕ ರಾಜೇಂದ್ರ ಜಾಟ್ ಮತ್ತು ಶಂಬು ದಯಾಳ್ ಜಾಟ್ ಎಂಬವರನ್ನು ಬಂಧಿಸಲಾಗಿದೆ. ಇಬ್ಬರೂ ಚಾಲಕರಾಗಿದ್ದು, ವ್ಯವಸಾಯ ಕೂಡಾ ಮಾಡಲಿದ್ದಾರೆ ಎಂದು ಸಿಕರ್ ನ ಸಾದರ್ ಪೊಲೀಸ್ ಠಾಣಾಧಿಕಾರಿ ಪುಷ್ಪೇಂದ್ರ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT