ದೇಶ

ಕ್ವಿಟ್ ಇಂಡಿಯಾ ದಿನಾಚರಣೆ:  202 ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿ ಗೌರವ

ಕ್ವಿಟ್ ಇಂಡಿಯಾ ದಿನಾಚರಣೆಯ 78 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ದೇಶಾದ್ಯಂತದ  202 ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿದ್ದಾರೆ.

ನವದೆಹಲಿ: ಕ್ವಿಟ್ ಇಂಡಿಯಾ ದಿನಾಚರಣೆಯ 78 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ದೇಶಾದ್ಯಂತದ  202 ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ಸಲುವಾಗಿ ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವದಂದು ರಾಷ್ಟ್ರಪತಿ ಭವನದಲ್ಲಿ ಪ್ರತಿ ವರ್ಷ ರಾಷ್ಟ್ರಪತಿ "ಮನೆ"ಯಲ್ಲಿ ವಿಶೇಷ ಕಾರ್ಯಕ್ರಮ  ಆಯೋಜಿಸುತ್ತಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ತಿಳಿಸಿದೆ. ಈ ವರ್ಷ ಕೋವಿಡ್ 19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜನೆ ಸಾಧಯಾಗುವುದಿಲ್ಲ  ಎಂದು ಹೇಳಿಕೆ ತಿಳಿಸಿದೆ.

"ಕಾರ್ಯಕ್ರಮ ಆಯೋಜನೆ ಸಾಧ್ಯವಾಗದ ಕಾರಣ ರಾಜ್ಯ / ಕೇಂದ್ರಾಡಳಿತ ಸರ್ಕಾರಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಶಾಲು ಮತ್ತು ಗೌರವ ಸೂಚಕ ಫಲಕ ನೀಡಿ ಗೌರವಿಸಿ ಸನ್ಮಾನಿಸಲು ವಿನಂತಿಸಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ / ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ / ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಧ್ಯಕ್ಷರ ಪರವಾಗಿ ತಮ್ಮಸ್ಥಳಗಳಲ್ಲೇ ಈ ಕಾರ್ಯಕ್ರಮ ನಡೆಯಬೇಕು: ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರಪತಿ ಭವನದ ಆಯುಕ್ತರ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯವಾದ ಪ್ರಶಸ್ತಿ ಪ್ರಧಾನ ಅಗತ್ಯ ವಸ್ತುಗಳು, " ಮತ್ತು ಶಾಲುಗಳನ್ನು ಒದಗಿಸಿದೆ ಎಂದು ಅದು ಹೇಳಿದೆ. 

ಭಾರತದಲ್ಲಿ ಬ್ರಿಟಿಷ್ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ 1942 ರ ಆಗಸ್ಟ್ 9ರಂದು ಮಹಾತ್ಮ ಗಾಂಧಿಯವರು ಕ್ವಿಟ್ ಇಂಡಿಯಾ ಚಳವಳಿಯನ್ನು ಪ್ರಾರಂಭಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT