ಶಾ ಫೈಜಲ್ 
ದೇಶ

ಮೋದಿ ಸರ್ಕಾರದ ವಿರುದ್ದ ಸಿಡಿದೆದ್ದು ರಾಜಕೀಯ ಸೇರಿದ್ದ ಐಎಎಸ್ ಅಧಿಕಾರಿ ಶಾ ಫೈಜಲ್ ಮತ್ತೆ ಸರ್ಕಾರಿ ಸೇವೆಗೆ?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದು ತಮ್ಮ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ರಾಜಕೀಯ ಪಕ್ಷ ಸ್ಥಾಪಿಸಿದ್ದ ಮಾಜಿ ಐಎಎಸ್ ಅಧಿಕಾರಿ ಶಾ ಫೈಜಲ್ ಇದೀಗ ರಾಜಕೀಯವನ್ನು ತೊರೆದಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದು ತಮ್ಮ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ರಾಜಕೀಯ ಪಕ್ಷ ಸ್ಥಾಪಿಸಿದ್ದ ಮಾಜಿ ಐಎಎಸ್ ಅಧಿಕಾರಿ ಶಾ ಫೈಜಲ್ ಇದೀಗ ರಾಜಕೀಯವನ್ನು ತೊರೆದಿದ್ದಾರೆ.

2019 ಮಾರ್ಚ್ 16ರಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್ಮೆಂಟ್(ಜೆಕೆಪಿಎಂ) ಪಕ್ಷವನ್ನು ಸ್ಥಾಪಿಸಿದ್ದ ಶಾ ಫೈಜಲ್ ಇದೀಗ ರಾಜಕೀಯವನ್ನು ತೊರೆದಿದ್ದಾರೆ. ಇದೇ ವೇಳೆ ಅವರು ಮತ್ತೆ ಸರ್ಕಾರಿ ಸೇವೆ ಸಲ್ಲಿಸುತ್ತಾರೆ ಎಂದು ಹೇಳಲಾಗುತ್ತಿದೆ. 

ಶಾ ಫೈಜಲ್ Dbjvdvg ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಹಾಲಿ ಜೆಕೆಪಿಎಂ ಉಪಾಧ್ಯಕ್ಷ ಫಿರೋಜ್ ಪೀರ್ಜಾಡಾ ಅವರನ್ನು ಮಧ್ಯಂತರ ಅಧ್ಯಕ್ಷರಾಗಿ ಸರ್ವಾನುಮತದಿಂದ ನೇಮಕ ಮಾಡಲಾಗಿದೆ. 

ಕಳೆದ ವರ್ಷ ಆಗಸ್ಟ್ 5ರಂದು ಆರ್ಟಿಕಲ್ 370 ರನ್ನು ರದ್ದುಗೊಳಿಸಿತ್ತು. ಅಂದಿನಿಂದ ಫೈಜಲ್ ರನ್ನು ಗೃಹಬಂಧನದಲ್ಲಿ ಇಡಲಾಗಿದೆ ಎಂದು ಜೆಕೆಪಿಎಂ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ. 

ಗೃಹ ಬಂಧನದಲ್ಲಿರುವುದರಿಂದ ರಾಜಕೀಯ ಚಟುವಟಿಕೆಗಳನ್ನು ಮುಂದುವರಿಸುವ ಸ್ಥಿತಿಯಲ್ಲಿಲ್ಲ ಎಂದು ಫೈಜಲ್ ಪಕ್ಷದ ರಾಜ್ಯ ಕಾರ್ಯನಿರ್ವಾಹಕ ಸದಸ್ಯರಿಗೆ ಮಾಹಿತಿ ನೀಡಿದ್ದರು. ಜೊತೆಗೆ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ವಿನಂತಿಸಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ವಿನಂತಿಯನ್ನು ಗಮನದಲ್ಲಿಟ್ಟುಕೊಂಡು, ಅವರ ಮನವಿಯನ್ನು ಸ್ವೀಕರಿಸಲು ನಿರ್ಧರಿಸಲಾಯಿತು. ಇದರಿಂದಾಗಿ ಅವರು ತಮ್ಮ ಜೀವನವನ್ನು ಉತ್ತಮವಾಗಿ ಮುಂದುವರಿಸಬಹುದು ಮತ್ತು ಅವರು ಆಯ್ಕೆ ಮಾಡುವ ಯಾವುದೇ ರೀತಿಯಲ್ಲಿ ಕೊಡುಗೆ ನೀಡಬಹುದು ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಆಗಸ್ಟ್ 5, 2019ರಿಂದ ಗೃಹಬಂಧನದಲ್ಲಿರುವ ಪಕ್ಷದ ಮುಖ್ಯಸ್ಥ ಜಾವೇದ್ ಮುಸ್ತಫಾ ಮಿರ್ ಅವರ ರಾಜೀನಾಮೆಯನ್ನು ಜೆಕೆಪಿಎಂ ಅಂಗೀಕರಿಸಿದೆ. ಪಿಡಿಪಿ ಮಾಜಿ ನಾಯಕ ಮತ್ತು ಸಚಿವರಾಗಿದ್ದ ಮುಸ್ತಫಾ ಕಳೆದ ವರ್ಷ ಜೆಕೆಪಿಎಂಗೆ ಸೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT