ಪ್ರಧಾನಿ ಮೋದಿ 
ದೇಶ

ಬುದ್ಧ ಹುಟ್ಟಿದ್ದು ನೇಪಾಳದಲ್ಲಿ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಬುದ್ಧ ನೇಪಾಳದಲ್ಲಿ ಹುಟ್ಟಿದ್ದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರ ಹೇಳಿಕೆ ಸಂಬಂಧ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 

ನವದೆಹಲಿ: ಬುದ್ಧ ನೇಪಾಳದಲ್ಲಿ ಹುಟ್ಟಿದ್ದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರ ಹೇಳಿಕೆ ಸಂಬಂಧ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 

ವೆಬಿನಾರ್ ಒಂದರಲ್ಲಿ ಮಾತನಾಡಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು, ಶ್ರೇಷ್ಠ ಭಾರತೀಯರಲ್ಲಿ ಗೌತಮ ಬುದ್ಧ ಮತ್ತು ಮಹಾತ್ಮಾ ಗಾಂಧೀಜಿ ಇದ್ದಾರೆಂದು ಹೇಳಿದ್ದರು. 

ಈ ಹೇಳಿಕೆಗೆ ನೇಪಾಳ ವಿದೇಶಾಂಗ ಸಚಿವಾಲಯ ಆಕ್ರೋಶ ವ್ಯಕ್ತಪಡಿಸಿತ್ತು. ಐತಿಹಾಸಿಕ ಮತ್ತು ಪುರಾತತ್ವ ದಾಖಲೆಗಳು ಗೌತಮ ಬುದ್ಧ ನೇಪಾಳದಲ್ಲಿ ಹುಟ್ಟಿದ್ದು ಎನ್ನುವುದನ್ನು ಸಾಬೀತುಪಡಿಸಿದೆ ಎಂದು ತಿಳಿಸಿತ್ತು. ಅಲ್ಲದೆ, 2014ರಲ್ಲಿ ನೇಪಾಳ ಸಂಸತ್ ನಲ್ಲಿ ಭಾರತದ ಪ್ರಧಾನಿ ಮೋದಿಯವರು ಮಾಡಿದ್ದ ಭಾಷಣದಲ್ಲೂ ಬುದ್ಧ ನೇಪಾಳದಲ್ಲಿ ಹುಟ್ಟಿದವರು ಎಂದು ಹೇಳಿದ್ದರು ಎಂದಿತ್ತು. 

ಹೇಳಿಕೆಗಳ ವಿವಾದಕ್ಕೆ ಇದೀಗ ಭಾರತ ತೆರೆ ಎಳೆದಿದ್ದು, ವಿದೇಶಾಂಗ ಸಚಿವರ ಹೇಳಿಕೆಯೂ ನಮ್ಮ ಬೌದ್ಧ ಪರಂಪರೆಯನ್ನು ಉಲ್ಲೇಖಿಸಿದ್ದಾಗಿತ್ತು. ಗೌತಮ ಬುದ್ಧ ಜನಿಸಿದ್ದು, ನೇಪಾಳದಲ್ಲಿ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸ್ಪಷ್ಟಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT