ಪ್ರಧಾನಿ ಮೋದಿ 
ದೇಶ

ಬುದ್ಧ ಹುಟ್ಟಿದ್ದು ನೇಪಾಳದಲ್ಲಿ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಬುದ್ಧ ನೇಪಾಳದಲ್ಲಿ ಹುಟ್ಟಿದ್ದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರ ಹೇಳಿಕೆ ಸಂಬಂಧ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 

ನವದೆಹಲಿ: ಬುದ್ಧ ನೇಪಾಳದಲ್ಲಿ ಹುಟ್ಟಿದ್ದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರ ಹೇಳಿಕೆ ಸಂಬಂಧ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 

ವೆಬಿನಾರ್ ಒಂದರಲ್ಲಿ ಮಾತನಾಡಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು, ಶ್ರೇಷ್ಠ ಭಾರತೀಯರಲ್ಲಿ ಗೌತಮ ಬುದ್ಧ ಮತ್ತು ಮಹಾತ್ಮಾ ಗಾಂಧೀಜಿ ಇದ್ದಾರೆಂದು ಹೇಳಿದ್ದರು. 

ಈ ಹೇಳಿಕೆಗೆ ನೇಪಾಳ ವಿದೇಶಾಂಗ ಸಚಿವಾಲಯ ಆಕ್ರೋಶ ವ್ಯಕ್ತಪಡಿಸಿತ್ತು. ಐತಿಹಾಸಿಕ ಮತ್ತು ಪುರಾತತ್ವ ದಾಖಲೆಗಳು ಗೌತಮ ಬುದ್ಧ ನೇಪಾಳದಲ್ಲಿ ಹುಟ್ಟಿದ್ದು ಎನ್ನುವುದನ್ನು ಸಾಬೀತುಪಡಿಸಿದೆ ಎಂದು ತಿಳಿಸಿತ್ತು. ಅಲ್ಲದೆ, 2014ರಲ್ಲಿ ನೇಪಾಳ ಸಂಸತ್ ನಲ್ಲಿ ಭಾರತದ ಪ್ರಧಾನಿ ಮೋದಿಯವರು ಮಾಡಿದ್ದ ಭಾಷಣದಲ್ಲೂ ಬುದ್ಧ ನೇಪಾಳದಲ್ಲಿ ಹುಟ್ಟಿದವರು ಎಂದು ಹೇಳಿದ್ದರು ಎಂದಿತ್ತು. 

ಹೇಳಿಕೆಗಳ ವಿವಾದಕ್ಕೆ ಇದೀಗ ಭಾರತ ತೆರೆ ಎಳೆದಿದ್ದು, ವಿದೇಶಾಂಗ ಸಚಿವರ ಹೇಳಿಕೆಯೂ ನಮ್ಮ ಬೌದ್ಧ ಪರಂಪರೆಯನ್ನು ಉಲ್ಲೇಖಿಸಿದ್ದಾಗಿತ್ತು. ಗೌತಮ ಬುದ್ಧ ಜನಿಸಿದ್ದು, ನೇಪಾಳದಲ್ಲಿ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸ್ಪಷ್ಟಪಡಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT