ಸಂಗ್ರಹ ಚಿತ್ರ 
ದೇಶ

ಚೆನ್ನೈ-ಅಂಡಮಾನ್ ಸಬ್'ಮರೈನ್ ಆಪ್ಟಿಕಲ್ ಫೈಬರ್ ಕನೆಕ್ಟಿವಿಟಿಗೆ ಪ್ರಧಾನಿ ಮೋದಿ ಚಾಲನೆ

ಬಹು ನಿರೀಕ್ಷಿತ ಚೆನ್ನೈ-ಅಂಡಮಾನ್ ಸಬ್ ಮರೈನ್ ಆಪ್ಟಿಕಲ್ ಫೈಬರ್ ಕನೆಕ್ಟಿವಿಟಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ. 

ನವದೆಹಲಿ: ಬಹು ನಿರೀಕ್ಷಿತ ಚೆನ್ನೈ-ಅಂಡಮಾನ್ ಸಬ್ ಮರೈನ್ ಆಪ್ಟಿಕಲ್ ಫೈಬರ್ ಕನೆಕ್ಟಿವಿಟಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ. 

2018ರ ಡಿಸೆಂಬರ್ 30 ರಂದು ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಪೋರ್ಟ್ ಬ್ಲೈರ್ ನಲ್ಲಿ ಭೂಮಿಪೂಜೆ ನೆರವೇರಿಸಿದ್ದರು. ಇದರಂತೆ ಯೋಜನೆ ಇದೀಗ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. 

ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಅತ್ಯಂತ ಮಹತ್ವದ ಆಯಕಟ್ಟಿನ ಪ್ರದೇಶಗಳಾಗಿದ್ದು, ಅಲ್ಲಿಗೆ ಸಂಪರ್ಕ ಕಲ್ಪಿಸುವುದು ದೇಶದ ಪ್ರಮುಖ ಕರ್ತವ್ಯವಾಗಿದೆ. ನಿಗದಿತ ಅವಧಿಯಲ್ಲಿ 2,300 ಕಿ.ಮೀ. ಉದ್ದದ ಕೇಬಲ್​ ಅನ್ನು ಸಮುದ್ರದಡಿಯಲ್ಲಿ ಅಳವಡಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಆಳ ಸಮುದ್ರ ಸಮೀಕ್ಷೆ, ಕೇಬಲ್​ ಗುಣಮಟ್ಟ ಮತ್ತು ವಿಶೇಷ ನೌಕೆಗಳನ್ನು ಉಪಯೋಗಿ ಕೇಬಲ್ ಅಳವಡಿಸುವ ಕಷ್ಟಕರ ಕೆಲಸವನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. 

ಹೈ ಇಂಪ್ಯಾಕ್ಟ್​ ಪ್ರಾಜೆಕ್ಟ್​ಗಳು ಅಂಡಮಾನ್ ಮತ್ತು ನಿಕೋಬಾರ್​ನ 12 ದ್ವೀಪಗಳಿಗೆ ವಿಸ್ತರಣೆಯಾಗಲಿದ್ದು, ಅಲ್ಲಿ ಬಹುದೊಡ್ಡ ಸಮಸ್ಯೆಯಾಗಿದ್ದ ಮೊಬೈಲ್ ಮತ್ತು ಇಂಟರ್​ನೆಟ್ ಸಂಪರ್ಕ ಸಮಸ್ಯೆಯನ್ನು ಇಂದು ನಿವಾರಣೆಗೊಂಡಿದೆ. ಇದರ ಹೊರತಾಗಿ ರಸ್ತೆ, ವಾಯು ಮತ್ತು ಜಲ ಸಾರಿಗೆ ಮೂಲಕ ಆ ದ್ವೀಪಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯವೂ ಶೀಘ್ರವೇ ಆರಂಭಗೊಳ್ಳಳಿದೆ. 

ಈ ಆಪ್ಟಿಕಲ್ ಫೈಬರ್ ಕೇಬಲ್ ಪ್ರಾಜೆಕ್ಟ್​ ಯೋಜನೆಯು ಬದುಕನ್ನು ಸರಳಗೊಳಿಸುವ ದೇಶದ ಬದ್ಧತೆಯ ಭಾಗವಾಗಿದೆ. ಅದು ಆನ್​ಲೈನ್ ಕ್ಲಾಸ್​ಗಳಿರಬಹುದು, ಟೂರಿಸಂ, ಬ್ಯಾಂಕಿಂಗ್​, ಶಾಪಿಂಗ್​ ಅಥವಾ ಟೆಲಿಮೆಡಿಸಿನ್​ ಇರಬಹುದು ಇವೆಲ್ಲವೂ ಇನ್ನು ಅಂಡಮಾನ್​ – ನಿಕೋಬಾರ್​ನಲ್ಲಿರುವ ಸಾವಿರಾರು ಕುಟುಂಬಗಳಿಗೆ ಸುಲಭವಾಗಿ ಸಿಗಲಿದೆ. ಅಂಡಮಾನ್​ಗೆ ಹೋಗುವ ಪ್ರವಾಸಿಗಳಿಗೂ ಈ ಸೌಲಭ್ಯ ಸಿಗಲಿದೆ. ನೆಟ್​ ಕನೆಕ್ಟಿವಿಟಿ ಸಿಗುವ ಕಾರಣ ಇನ್ನು ಅಂಡಮಾನ್ ನಿಕೋಬಾರ್ ದ್ವೀಪಗಳು ಪ್ರವಾಸಿಗರ ನಂ. 1 ಪ್ರವಾಸಿ ಸ್ಥಳವಾಗಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT