ಸುಶಾಂತ್ ಪ್ರಕರಣ: ಮಾಧ್ಯಮಗಳ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರಿಯಾ ಚಕ್ರವರ್ತಿ 
ದೇಶ

ಸುಶಾಂತ್ ಪ್ರಕರಣ: ಮಾಧ್ಯಮಗಳ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರಿಯಾ ಚಕ್ರವರ್ತಿ 

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಮಾಧ್ಯಮಗಳು ಅನುಚಿತವಾಗಿ ವರದಿ ಪ್ರಕಟಿಸುತ್ತಿದ್ದು, ತೀರ್ಪು ನೀಡುತ್ತಿವೆ ಎಂದು ಆಕ್ಷೇಪಿಸಿ ರಿಯಾ ಚಕ್ರವರ್ತಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಮಾಧ್ಯಮಗಳು ಅನುಚಿತವಾಗಿ ವರದಿ ಪ್ರಕಟಿಸುತ್ತಿದ್ದು, ತೀರ್ಪು ನೀಡುತ್ತಿವೆ ಎಂದು ಆಕ್ಷೇಪಿಸಿ ರಿಯಾ ಚಕ್ರವರ್ತಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ರಿಯಾ ಚಕ್ರವರ್ತಿ, ತಮ್ಮನ್ನು ಮಾಧ್ಯಮಗಳು ಅಪರಾಧಿಯೆಂಬಂತೆ ತೀರ್ಪು ನೀಡುವ ರೀತಿಯಲ್ಲಿ ವರದಿಗಳನ್ನು ಪ್ರಕಟಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ತಾವು ಈ ಪ್ರಕರಣಕ್ಕೆ ಸಂಬಂಧಿಸಿದ ರಾಜಕೀಯಕ್ಕೆ ಬಲಿಪಶು ಆಗದಂತೆ ಗಮನ ಹರಿಸಬೇಕಿದೆ ಎಂದು ರಿಯಾ ಚಕ್ರವರ್ತಿ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ಇದೇ ಕಾರಣಗಳಿಂದಾಗಿ ಬಿಹಾರ ಪೊಲೀಸರು ಈ ಪ್ರಕರಣವನ್ನು ಸಿಬಿಐ ಗೆ ವಹಿಸಿರುವುದೂ ಸಹ ಅಕ್ರಮವೇ ಎಂದು ಅರ್ಜಿಯಲ್ಲಿ ರಿಯಾ ಚಕ್ರವರ್ತಿ ಹೇಳಿದ್ದಾರೆ. ಆದರೆ ಕೋರ್ಟ್ ಸಿಬಿಐಗೆ ಈ ಪ್ರಕರಣವನ್ನು ವಹಿಸಿದರೆ ತಮ್ಮದೇನೂ ಆಕ್ಷೇಪವಿಲ್ಲ ಎಂದೂ ರಿಯಾ ಚಕ್ರವರ್ತಿ ಹೇಳಿದ್ದಾರೆ.

ಕಳೆದ 30 ದಿನಗಳಲ್ಲಿ ಸುಶಾಂತ್ ರೀತಿಯಲ್ಲಿ ಅಶುತೋಷ್ ಭಕ್ರೆ ಹಾಗೂ ಸಮೀರ್ ಶರ್ಮಾ ಅವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಆದರೆ ಈ ಬಗ್ಗೆ ಮಾಧ್ಯಮಗಳು ತುಟಿ ಬಿಚ್ಚುತ್ತಿಲ್ಲ ಎಂಬ ಅಂಶವನ್ನೂ ಕೋರ್ಟ್ ಗೆ ರಿಯಾಚಕ್ರವರ್ತಿ ಮನವರಿಕೆ ಮಾಡಿಕೊಟ್ಟಿದ್ದಾರೆ. ರಿಯಾ ಸಲ್ಲಿಸಿರುವ ಅರ್ಜಿ ವಿಚಾರಣೆ ಮಂಗಳವಾರ ನಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT