ಪೌಲ್ ದುರೈ 
ದೇಶ

ಸತಾನ್‌ಕುಲಂ ಕಸ್ಟಡಿ ಸಾವು ಪ್ರಕರಣ: ಆರೋಪಿ ಪೊಲೀಸ್ ಅಧಿಕಾರಿ ಕೊರೋನಾಗೆ ಬಲಿ

ದೇಶದಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡಿನ ಸತಾನ್‌ಕುಲಂ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣದ ಅರೋಪಿಗಳಲ್ಲಿ ಒಬ್ಬರಾಗಿದ್ದ ಸ್ಪೆಷನ್ ಸಬ್ ಇನ್ಸ್'ಪೆಕ್ಟರ್ ಆಫ್ ಪೊಲೀಸ್ ಪೌಲ್'ದುರೈ ಅವರು ಕೊರೋನಾ ವೈರಸ್ ಸೋಂಕಿನಿಂದ ಬಲಿಯಾಗಿದ್ದಾರೆಂದು ಸೋಮವಾರ ವರದಿಗಳಿಂದ ತಿಳಿದುಬಂದಿದೆ. 

ಮದುರೈ: ದೇಶದಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡಿನ ಸತಾನ್‌ಕುಲಂ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣದ ಅರೋಪಿಗಳಲ್ಲಿ ಒಬ್ಬರಾಗಿದ್ದ ಸ್ಪೆಷನ್ ಸಬ್ ಇನ್ಸ್'ಪೆಕ್ಟರ್ ಆಫ್ ಪೊಲೀಸ್ ಪೌಲ್'ದುರೈ ಅವರು ಕೊರೋನಾ ವೈರಸ್ ಸೋಂಕಿನಿಂದ ಬಲಿಯಾಗಿದ್ದಾರೆಂದು ಸೋಮವಾರ ವರದಿಗಳಿಂದ ತಿಳಿದುಬಂದಿದೆ. 

ತಂದೆ ಮಗನ ಸಾವಿಗೆ ಕಾರಣರಾದ ಆರೋಪ ಹೊತ್ತಿರುವ 10 ಮಂದಿಯಲ್ಲಿ ಪೌಲ್ ದುರೈ ಕೂಡ ಒಬ್ಬರಾಗಿದ್ದರು, ಕೊರೋನಾ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಲಾಕ್ಡೌನ್ ವೇಳೆ ಅವಧಿ ಮೀರಿ ಅಂಗಡಿ ತೆರೆದಿದ್ದ ಹಿನ್ನೆಲೆಯಲ್ಲಿ ತಂದಿ ಹಾಗೂ ಮಗನನ್ನು ಕಸ್ಟಡಿಯಲ್ಲಿ ಇರಿಸಿಕೊಂಡಿದ್ದ ಪೊಲೀಸರು ಅವರ ಮೇಲೆ ದೌರ್ಜನ್ಯ ಎಸಗಿ ಸಾವಿಗೆ ಕಾರಣರಾಗಿದ್ದರು ಎಂದು ಹೇಳಲಾಗಿತ್ತುಯ ಪ್ರಕರಣ ಸಂಬಂಧ ಜುಲೈ.5ರಂದು ಪೌಲ್ ದುರೈ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು.

ಜುಲೈ 28 ರಂದು ಪೌಲ್ ಅವರಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಪೌಲ್ ಅವರ ಪತ್ನಿ ಮಂಗಯಾರ್ತಿಲಂಗಂ ಅವರು ಅರ್ಜಿ ಸಲ್ಲಿಸಿ, ಪತಿಯನ್ನು ತಮ್ಮ ಊರು ಕನ್ಯಾಕುಮಾರಿಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಸಲುವಾಗಿ ಕರೆದೊಯ್ಯಲು ಅನುಮತಿ ನೀಡುವಂತೆ ಕೋರಿದ್ದರು, 

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತಿಯಲ್ಲಿ ವಾರ ಕಳೆದರೂ ಯಾವುದೇ ಸುಧಾರಣೆಗಳೂ ಕಂಡಿಲ್ಲ. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಳ್ಳುತ್ತಿದೆ. ಹೀಗಾಗಿ ಅವರಿಗೆ ಹೆಚ್ಚಿನ ಗುಣಮಟ್ಟದ ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದ್ದರು. ಅನುಮತಿಗೆ ಮನವಿ ಮಾಡಿಕೊಂಡಿದ್ದ ನಡುವಲ್ಲೇ ಇದೀಗ ಪೌಲ್ ಅವರು ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT