ಪೌಲ್ ದುರೈ 
ದೇಶ

ಸತಾನ್‌ಕುಲಂ ಕಸ್ಟಡಿ ಸಾವು ಪ್ರಕರಣ: ಆರೋಪಿ ಪೊಲೀಸ್ ಅಧಿಕಾರಿ ಕೊರೋನಾಗೆ ಬಲಿ

ದೇಶದಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡಿನ ಸತಾನ್‌ಕುಲಂ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣದ ಅರೋಪಿಗಳಲ್ಲಿ ಒಬ್ಬರಾಗಿದ್ದ ಸ್ಪೆಷನ್ ಸಬ್ ಇನ್ಸ್'ಪೆಕ್ಟರ್ ಆಫ್ ಪೊಲೀಸ್ ಪೌಲ್'ದುರೈ ಅವರು ಕೊರೋನಾ ವೈರಸ್ ಸೋಂಕಿನಿಂದ ಬಲಿಯಾಗಿದ್ದಾರೆಂದು ಸೋಮವಾರ ವರದಿಗಳಿಂದ ತಿಳಿದುಬಂದಿದೆ. 

ಮದುರೈ: ದೇಶದಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡಿನ ಸತಾನ್‌ಕುಲಂ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣದ ಅರೋಪಿಗಳಲ್ಲಿ ಒಬ್ಬರಾಗಿದ್ದ ಸ್ಪೆಷನ್ ಸಬ್ ಇನ್ಸ್'ಪೆಕ್ಟರ್ ಆಫ್ ಪೊಲೀಸ್ ಪೌಲ್'ದುರೈ ಅವರು ಕೊರೋನಾ ವೈರಸ್ ಸೋಂಕಿನಿಂದ ಬಲಿಯಾಗಿದ್ದಾರೆಂದು ಸೋಮವಾರ ವರದಿಗಳಿಂದ ತಿಳಿದುಬಂದಿದೆ. 

ತಂದೆ ಮಗನ ಸಾವಿಗೆ ಕಾರಣರಾದ ಆರೋಪ ಹೊತ್ತಿರುವ 10 ಮಂದಿಯಲ್ಲಿ ಪೌಲ್ ದುರೈ ಕೂಡ ಒಬ್ಬರಾಗಿದ್ದರು, ಕೊರೋನಾ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಲಾಕ್ಡೌನ್ ವೇಳೆ ಅವಧಿ ಮೀರಿ ಅಂಗಡಿ ತೆರೆದಿದ್ದ ಹಿನ್ನೆಲೆಯಲ್ಲಿ ತಂದಿ ಹಾಗೂ ಮಗನನ್ನು ಕಸ್ಟಡಿಯಲ್ಲಿ ಇರಿಸಿಕೊಂಡಿದ್ದ ಪೊಲೀಸರು ಅವರ ಮೇಲೆ ದೌರ್ಜನ್ಯ ಎಸಗಿ ಸಾವಿಗೆ ಕಾರಣರಾಗಿದ್ದರು ಎಂದು ಹೇಳಲಾಗಿತ್ತುಯ ಪ್ರಕರಣ ಸಂಬಂಧ ಜುಲೈ.5ರಂದು ಪೌಲ್ ದುರೈ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು.

ಜುಲೈ 28 ರಂದು ಪೌಲ್ ಅವರಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಪೌಲ್ ಅವರ ಪತ್ನಿ ಮಂಗಯಾರ್ತಿಲಂಗಂ ಅವರು ಅರ್ಜಿ ಸಲ್ಲಿಸಿ, ಪತಿಯನ್ನು ತಮ್ಮ ಊರು ಕನ್ಯಾಕುಮಾರಿಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಸಲುವಾಗಿ ಕರೆದೊಯ್ಯಲು ಅನುಮತಿ ನೀಡುವಂತೆ ಕೋರಿದ್ದರು, 

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತಿಯಲ್ಲಿ ವಾರ ಕಳೆದರೂ ಯಾವುದೇ ಸುಧಾರಣೆಗಳೂ ಕಂಡಿಲ್ಲ. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಳ್ಳುತ್ತಿದೆ. ಹೀಗಾಗಿ ಅವರಿಗೆ ಹೆಚ್ಚಿನ ಗುಣಮಟ್ಟದ ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದ್ದರು. ಅನುಮತಿಗೆ ಮನವಿ ಮಾಡಿಕೊಂಡಿದ್ದ ನಡುವಲ್ಲೇ ಇದೀಗ ಪೌಲ್ ಅವರು ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT