ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಶೇ.70 ರ ಸನಿಹದಲ್ಲಿ ಚೇತರಿಕೆ ಪ್ರಮಾಣ, ಶೇ.2 ಕ್ಕಿಂತಲೂ ಕಡಿಮೆಯಾದ ಮರಣ ಪ್ರಮಾಣ- ಕೇಂದ್ರ ಸರ್ಕಾರ

ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣ ಕಾರ್ಯತಂತ್ರ ಯಶಸ್ವಿ ಅನುಷ್ಠಾನ, ಗಂಭೀರ  ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ನಿರ್ವಹಣೆಯೊಂದಿಗೆ ಪರಿಣಾಮಕಾರಿ ಪರೀಕ್ಷೆಯಿಂದಾಗಿ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.70ರ ಸನ್ನಿಹದಲ್ಲಿದ್ದು, ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣ ಕಾರ್ಯತಂತ್ರ ಯಶಸ್ವಿ ಅನುಷ್ಠಾನ, ಗಂಭೀರ  ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ನಿರ್ವಹಣೆಯೊಂದಿಗೆ ಪರಿಣಾಮಕಾರಿ ಪರೀಕ್ಷೆಯಿಂದಾಗಿ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.70ರ ಸನ್ನಿಹದಲ್ಲಿದ್ದು, ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.

ಹೆಚ್ಚಿನ ಸಂಖ್ಯೆಯ ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 15 ಲಕ್ಷದ 83 ಸಾವಿರದ 489 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ. 69. 80ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ
ಒಟ್ಟು 6,39,929 ಸಕ್ರಿಯ ಪ್ರಕರಣಗಳಲ್ಲಿ ಶೇ. 28.21 ರಷ್ಟು ಪ್ರಕರಣಗಳು ಮಾತ್ರ ಪಾಸಿಟಿವ್ ಕೇಸ್ ಗಳಾಗಿವೆ. ಇವರೆಲ್ಲರೂ
ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಸಚಿವಾಲಯ ತಿಳಿಸಿದೆ.

ಚೇತರಿಕೆ ಪ್ರಮಾಣದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಚೇತರಿಕೆಯಾದ ರೋಗಿಗಳು ಮತ್ತು ಸಕ್ರಿಯ ಕೋವಿಡ್-19 ಪ್ರಕರಣಗಳ ನಡುವಣ ಅಂತರ ಸುಮಾರು 9.5 ಲಕ್ಷಕ್ಕೆ ತಲುಪಿದ್ದು, ಸೋಂಕು ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸಾ ಕಾರ್ಯತಂತ್ರದಿಂದ ಈ ಅಂತರ ಪ್ರತಿದಿನ ಪ್ರಗತಿಯಾಗುತ್ತಿದೆ.ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದ್ದು, ಪ್ರಸ್ತುತ 1.99 ನಷ್ಟಿರುವುದಾಗಿ
 ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT