ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಶೇ.70 ರ ಸನಿಹದಲ್ಲಿ ಚೇತರಿಕೆ ಪ್ರಮಾಣ, ಶೇ.2 ಕ್ಕಿಂತಲೂ ಕಡಿಮೆಯಾದ ಮರಣ ಪ್ರಮಾಣ- ಕೇಂದ್ರ ಸರ್ಕಾರ

ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣ ಕಾರ್ಯತಂತ್ರ ಯಶಸ್ವಿ ಅನುಷ್ಠಾನ, ಗಂಭೀರ  ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ನಿರ್ವಹಣೆಯೊಂದಿಗೆ ಪರಿಣಾಮಕಾರಿ ಪರೀಕ್ಷೆಯಿಂದಾಗಿ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.70ರ ಸನ್ನಿಹದಲ್ಲಿದ್ದು, ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣ ಕಾರ್ಯತಂತ್ರ ಯಶಸ್ವಿ ಅನುಷ್ಠಾನ, ಗಂಭೀರ  ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ನಿರ್ವಹಣೆಯೊಂದಿಗೆ ಪರಿಣಾಮಕಾರಿ ಪರೀಕ್ಷೆಯಿಂದಾಗಿ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.70ರ ಸನ್ನಿಹದಲ್ಲಿದ್ದು, ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.

ಹೆಚ್ಚಿನ ಸಂಖ್ಯೆಯ ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 15 ಲಕ್ಷದ 83 ಸಾವಿರದ 489 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ. 69. 80ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ
ಒಟ್ಟು 6,39,929 ಸಕ್ರಿಯ ಪ್ರಕರಣಗಳಲ್ಲಿ ಶೇ. 28.21 ರಷ್ಟು ಪ್ರಕರಣಗಳು ಮಾತ್ರ ಪಾಸಿಟಿವ್ ಕೇಸ್ ಗಳಾಗಿವೆ. ಇವರೆಲ್ಲರೂ
ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಸಚಿವಾಲಯ ತಿಳಿಸಿದೆ.

ಚೇತರಿಕೆ ಪ್ರಮಾಣದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಚೇತರಿಕೆಯಾದ ರೋಗಿಗಳು ಮತ್ತು ಸಕ್ರಿಯ ಕೋವಿಡ್-19 ಪ್ರಕರಣಗಳ ನಡುವಣ ಅಂತರ ಸುಮಾರು 9.5 ಲಕ್ಷಕ್ಕೆ ತಲುಪಿದ್ದು, ಸೋಂಕು ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸಾ ಕಾರ್ಯತಂತ್ರದಿಂದ ಈ ಅಂತರ ಪ್ರತಿದಿನ ಪ್ರಗತಿಯಾಗುತ್ತಿದೆ.ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದ್ದು, ಪ್ರಸ್ತುತ 1.99 ನಷ್ಟಿರುವುದಾಗಿ
 ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT