ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಶೇ.70 ರ ಸನಿಹದಲ್ಲಿ ಚೇತರಿಕೆ ಪ್ರಮಾಣ, ಶೇ.2 ಕ್ಕಿಂತಲೂ ಕಡಿಮೆಯಾದ ಮರಣ ಪ್ರಮಾಣ- ಕೇಂದ್ರ ಸರ್ಕಾರ

ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣ ಕಾರ್ಯತಂತ್ರ ಯಶಸ್ವಿ ಅನುಷ್ಠಾನ, ಗಂಭೀರ  ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ನಿರ್ವಹಣೆಯೊಂದಿಗೆ ಪರಿಣಾಮಕಾರಿ ಪರೀಕ್ಷೆಯಿಂದಾಗಿ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.70ರ ಸನ್ನಿಹದಲ್ಲಿದ್ದು, ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣ ಕಾರ್ಯತಂತ್ರ ಯಶಸ್ವಿ ಅನುಷ್ಠಾನ, ಗಂಭೀರ  ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ನಿರ್ವಹಣೆಯೊಂದಿಗೆ ಪರಿಣಾಮಕಾರಿ ಪರೀಕ್ಷೆಯಿಂದಾಗಿ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.70ರ ಸನ್ನಿಹದಲ್ಲಿದ್ದು, ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.

ಹೆಚ್ಚಿನ ಸಂಖ್ಯೆಯ ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 15 ಲಕ್ಷದ 83 ಸಾವಿರದ 489 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ. 69. 80ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ
ಒಟ್ಟು 6,39,929 ಸಕ್ರಿಯ ಪ್ರಕರಣಗಳಲ್ಲಿ ಶೇ. 28.21 ರಷ್ಟು ಪ್ರಕರಣಗಳು ಮಾತ್ರ ಪಾಸಿಟಿವ್ ಕೇಸ್ ಗಳಾಗಿವೆ. ಇವರೆಲ್ಲರೂ
ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಸಚಿವಾಲಯ ತಿಳಿಸಿದೆ.

ಚೇತರಿಕೆ ಪ್ರಮಾಣದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಚೇತರಿಕೆಯಾದ ರೋಗಿಗಳು ಮತ್ತು ಸಕ್ರಿಯ ಕೋವಿಡ್-19 ಪ್ರಕರಣಗಳ ನಡುವಣ ಅಂತರ ಸುಮಾರು 9.5 ಲಕ್ಷಕ್ಕೆ ತಲುಪಿದ್ದು, ಸೋಂಕು ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸಾ ಕಾರ್ಯತಂತ್ರದಿಂದ ಈ ಅಂತರ ಪ್ರತಿದಿನ ಪ್ರಗತಿಯಾಗುತ್ತಿದೆ.ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದ್ದು, ಪ್ರಸ್ತುತ 1.99 ನಷ್ಟಿರುವುದಾಗಿ
 ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT