ಶಾ ಫಾಸಲ್ 
ದೇಶ

ನನ್ನ ನಿರುಪದ್ರವಿ ಭಿನ್ನಾಭಿಪ್ರಾಯವನ್ನು ದ್ರೋಹಿ ನಡೆಯ ರೀತಿ ನೋಡಲಾಯ್ತು: ಶಾ ಫಾಸಲ್

2009 ರಲ್ಲಿ ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೇ ಮೊದಲ ಸ್ಥಾನ ಪಡೆಯುವ ಮೂಲಕ ಜಮ್ಮು-ಕಾಶ್ಮೀರದಲ್ಲಿ ಯುವಕರಿಗೆ ಮಾದರಿಯಾಗಿದ್ದ ಶಾ ಫಾಸಲ್ ತಮ್ಮ ಪದವಿಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ್ದರು. ಆದರೆ ಈಗ ರಾಜಕೀಯಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದಾರೆ. 

ಶ್ರೀನಗರ: 2009 ರಲ್ಲಿ ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೇ ಮೊದಲ ಸ್ಥಾನ ಪಡೆಯುವ ಮೂಲಕ ಜಮ್ಮು-ಕಾಶ್ಮೀರದಲ್ಲಿ ಯುವಕರಿಗೆ ಮಾದರಿಯಾಗಿದ್ದ ಶಾ ಫಾಸಲ್ ತಮ್ಮ ಪದವಿಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ್ದರು. ಆದರೆ ಈಗ ರಾಜಕೀಯಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದಾರೆ. 

ಈ ಸಂದರ್ಭದಲ್ಲಿ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿರುವ ಶಾ ಫಾಸಲ್  ತಮ್ಮ ನಿರುಪದ್ರವಿ ಭಿನ್ನಮತ ವಿಶ್ವಾಸಘಾತುಕ, ದ್ರೋಹದ ರೀತಿ ಕಾಣಲಾರಂಭಿಸಿತು, ಇದರಿಂದಾಗಿ ಲಾಭವಾಗುವುದಕ್ಕಿಂತಲೂ ಹಾನಿಯೇ ಹೆಚ್ಚಾಯಿತು ಎಂದು ಹೇಳಿದ್ದಾರೆ. 

ಸಮಯದ ಜೊತೆ ನಾವೂ ವಿಕಾಸ ಹೊಂದಬೇಕು ಎಂದು ತಾವು ರಾಜಕೀಯ ತೊರೆಯುತ್ತಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ರಾಜ್ಯದಲ್ಲಿ ಹೊಸ ರಾಜಕೀಯ ವಾಸ್ತವವನ್ನು ಹುಟ್ಟುಹಾಕಿತ್ತು. ಬಂಧನದಲ್ಲಿದ್ದಾಗ, ನಾನು ಕೆಲವೊಂದು ನಿರ್ಧಾರಗಳನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂಬುದು ಅರಿವಾಯಿತು. 1949 ರ ರಾಷ್ಟ್ರೀಯ ಅಭಿಪ್ರಾಯ ಆರ್ಟಿಕಲ್ 370 ನ್ನು ಸಂವಿಧಾನದಲ್ಲಿ ಸೇರ್ಪಡೆಗೊಳಿಸಿತ್ತು.

2019 ರಲ್ಲಿ ರಾಷ್ಟ್ರೀಯ ಅಭಿಪ್ರಾಯ ಆರ್ಟಿಕಲ್ 370ಯನ್ನು ರದ್ದುಗೊಳಿಸುವುದರ ಪರವಾಗಿತ್ತು. ಇವೆಲ್ಲವನ್ನೂ ಬದಲಾವಣೆ ಮಾಡಿ ಸುಳ್ಳಿನ ಕನಸುಗಳನ್ನು ಜನರ ಮುಂದಿಟ್ಟು ನಾನು ರಾಜಕಾರಣ ಮಾಡುವುದಕ್ಕೆ ಸಾಧ್ಯವಿಲ್ಲ ಎಂಬುದು ನನಗೆ ಮನವರಿಕೆಯಾಗಿತ್ತು, ಇದರ ಬದಲಾಗಿ ರಾಜಕೀಯದಿಂದ ಹೊರಬರುವುದೇ ಉತ್ತಮ ಎಂದೆನಿಸಿತ್ತು ಎಂದು ಶಾ ಫಾಸಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT