ಸಂಗ್ರಹ ಚಿತ್ರ 
ದೇಶ

ಹವಾಲಾ ದಂಧೆ: ದೆಹಲಿಯಲ್ಲಿ ಚೀನಾ ಮೂಲದ ವ್ಯಕ್ತಿಗಳ ಮೇಲೆ ಐಟಿ ದಾಳಿ, ಸಾವಿರ ಕೋಟಿ ರೂ. ಅಕ್ರಮ ಬಯಲಿಗೆ!

ಭಾರತದಲ್ಲಿ ಭಾರತೀಯ ಕಂಪನಿಗಳ ಮೂಲಕ ಚೀನಾದ ವ್ಯಕ್ತಿಗಳು ಕಾರ್ಯಾಚರಿಸುತ್ತಿದ್ದನ್ನು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಅಷ್ಚು ಮಾತ್ರವಲ್ಲದೆ ಬರೊಬ್ಬರಿ ಸಾವಿರ ಕೋಟಿ ಅಕ್ರಮವನ್ನು ಬಯಲಿಗೆಳೆದಿದ್ದಾರೆ. 

ನವದೆಹಲಿ: ಭಾರತದಲ್ಲಿ ಭಾರತೀಯ ಕಂಪನಿಗಳ ಮೂಲಕ ಚೀನಾದ ವ್ಯಕ್ತಿಗಳು ಕಾರ್ಯಾಚರಿಸುತ್ತಿದ್ದನ್ನು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಅಷ್ಚು ಮಾತ್ರವಲ್ಲದೆ ಬರೊಬ್ಬರಿ ಸಾವಿರ ಕೋಟಿ ಅಕ್ರಮವನ್ನು ಬಯಲಿಗೆಳೆದಿದ್ದಾರೆ. 

ಮೂಲಗಳ ಪ್ರಕಾರ ಭಾರತದಲ್ಲಿ ನಕಲಿ(ಸಂಶಯಾಸ್ಪದ) ಕಂಪನಿಗಳನ್ನು ಹುಟ್ಟು ಹಾಕಿ ಒಂದು ಸಾವಿರ ಕೋಟಿ ರೂಪಾಯಿ ಹಣ ದುರುಪಯೋಗ ಜಾಲದಲ್ಲಿ ಶಾಮೀಲಾಗಿದ್ದ ಚೀನಾ ವ್ಯಕ್ತಿಗಳು ಹಾಗೂ ಅವರ ಸ್ಥಳೀಯ ಸಹವರ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದಾಗಿ ಸಿಬಿಡಿಟಿ (ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸೇಶನ್) ತಿಳಿಸಿದೆ.

ಇಲಾಖೆ ಮೂಲಗಳು ನೀಡಿರುವ ಮಾಹಿತಿಯಂತೆ ದೆಹಲಿ, ಗುರುಗ್ರಾಮ ಮತ್ತು ಘಾಜಿಯಾಬಾದ್ ನಲ್ಲಿ ಚೀನಿಯರು ನಡೆಸುತ್ತಿದ್ದ ಸುಮಾರು 12 ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇದರಲ್ಲಿ ಅವರ ಕೆಲವು ಭಾರತೀಯ ಸಹವರ್ತಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಕೂಡ ಸೇರಿದ್ದಾರೆ ಎಂದು ಸಿಬಿಡಿಟಿ ಪ್ರಕಟಣೆಯಲ್ಲಿ ತಿಳಿಸಿದೆ. 

ಹವಾಲ ವ್ಯವಹಾರ ನಡೆದಿರುವ ಬಗ್ಗೆ ದಾಖಲೆಗಳು ಸಿಕ್ಕಿವೆ. ಮನಿ ಲಾಂಡ್ರಿಂಗ್ ನಲ್ಲಿ ಬ್ಯಾಂಕ್ ಸಿಬ್ಬಂದಿ, ಚಾರ್ಟೆಡ್ ಅಕೌಂಟಂಟ್ಸ್ ಕೈವಾಡ ಇರುವುದು ದಾಳಿ ವೇಳೆ ಪತ್ತೆಯಾಗಿದೆ. ಹಾಂಕಾಂಗ್, ಯುಎಸ್ ಡಾಲರ್ ಗಳಲ್ಲಿ ಹವಾಲ ವ್ಯವಹಾರ ನಡೆದಿದೆ.  ಅಲ್ಲದೆ ಚೀನಿಯರು ಹಾಗೂ ಸ್ಥಳೀಯರು ಮನಿ ಲಾಂಡ್ರಿಂಗ್ ಮೂಲಕ ಸಂಗ್ರಹಿಸಿದ್ದ 1000 ಕೋಟಿ ರೂ ಮೌಲ್ಯದ ಆಸ್ತಿ ಈಗ ಐಟಿ ದಾಳಿಯಲ್ಲಿ ಪತ್ತೆಯಾಗಿದೆ. ಬೇನಾಮಿ ಕಂಪನಿಗಳ ಹೆಸರಿನಲ್ಲಿ ಅಕ್ರಮವಾಗಿ ನಗದು ಚಲಾವಣೆ ದಂಧೆ ನಡೆಸುತ್ತಿದ್ದರು. ಚೀನಾ ಮೂಲದ ಸಬ್ಸಿಡಿ ಕಂಪನಿ ಎಂದು ಹೇಳಿ ಸುಮಾರು 100 ಕೋಟಿ ರೂ ಶೆಲ್ ಕಂಪನಿಗಳಿಂದ ಪಡೆದಿದ್ದರು. ಭಾರತದೆಲ್ಲೆಡೆ ರಿಟೈಲ್ ಶೋರೂಮ್ ಆರಂಭಿಸುವ ಯೋಜನೆಯಿತ್ತು ಎಂದು ಸಿಬಿಡಿಟಿ ಹೇಳಿದೆ.

ಎಚ್ಚರಿಕೆ ನೀಡಿದ್ದ ಸಿಬಿಡಿಟಿ
ಇನ್ನು ಚೀನಿಯರು ಹವಾಲ ದಂಧೆಯಲ್ಲಿ ತೊಡಗಿರುವ ಬಗ್ಗೆ ಸಿಬಿಡಿಟಿ ಈ ಹಿಂದೆಯೇ ಸೂಚನೆ ನೀಡಿತ್ತು. ಅದರಂತೆ ಕೆಲ ಕಾಲದಿಂದ ಈ ಬಗ್ಗೆ ಪೂರ್ವಭಾವಿ ತನಿಖೆ ನಡೆಸಲಾಗುತ್ತಿತ್ತು.  ಬ್ಯಾಂಕ್ ಅಧಿಕಾರಿಗಳು, ಚೀನಿಯರು ಹೊಂದಿದ್ದ 40 ಬ್ಯಾಂಕ್ ಖಾತೆ ಮೂಲಕ ಬೇನಾಮಿ ಕಂಪನಿಗಳಿಗೆ ಹಣ ರವಾನೆಯಾಗಿರುವುದು ಪತ್ತೆಯಾಗಿತ್ತು. ಸರಿ ಸುಮಾರು 1000 ಕೋಟಿ ವ್ಯವಹಾರ ನಡೆದಿದೆ ಎಂದು ಐಟಿ ಇಲಾಖೆ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT