ಶರದ್ ಅರವಿಂದ್ ಬೋಬ್ಡೆ 
ದೇಶ

ಕೃಷ್ಣಜನ್ಮಾಷ್ಟಮಿಗೆ ಹೋಗ್ಬೇಕು ಬೇಲ್ ಕೊಡಿ-ಆರೋಪಿ, ಕೃಷ್ಣ ಹುಟ್ಟಿದ್ದು ಜೈಲಿನಲ್ಲೇ ಬೇಲ್ ಬೇಕಾ?: ಸಿಜೆಐ ಮರು ಪ್ರಶ್ನೆ!

ಸುಪ್ರೀಂ ಕೋರ್ಟ್ ನ ವಿಚಾರಣೆ ಸಂದರ್ಭದಲ್ಲಿ ಕೃಷ್ಣಜನ್ಮಾಷ್ಟಮಿಯನ್ನು ಉಲ್ಲೇಖಿಸಿ ಲಘು ಹಾಸ್ಯದ ಸಂದರ್ಭವೊಂದು ನಡೆದಿದೆ. 

ನವದೆಹಲಿ: ಸುಪ್ರೀಂ ಕೋರ್ಟ್ ನ ಕಲಾಪದಲ್ಲಿ ಕೃಷ್ಣಜನ್ಮಾಷ್ಟಮಿಯನ್ನು ಉಲ್ಲೇಖಿಸಿ ಲಘು ಹಾಸ್ಯದ ಸಂದರ್ಭವೊಂದು ವಿಚಾರಣೆ ವೇಳೆ ನಡೆದಿದೆ. 

ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ  ಭಗವಾನ್ ಶ್ರೀ ಕೃಷ್ಣ, ಮಹಾಭಾರತವನ್ನು ಉಲ್ಲೇಖಿಸಿ ಆಸಕ್ತಿದಾಯಕ ಹೇಳಿಕೆ ನೀಡಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನವಾದ ಇಂದು  ಜಾಮೀನು ಅರ್ಜಿಯ ವಿಚಾರಣೆನಡೆಸಿದ ಸಂದರ್ಭದಲ್ಲಿ, "ಶ್ರೀ ಕೃಷ್ಣ ಜೈಲಿನಲ್ಲಿ ಇಂದು ಜನಿಸಿದ ದಿನವಲ್ಲವೇ....

ನಿಮಗೆ ಜಾಮೀನು ಬೇಕೇ? ಇಲ್ಲವೆ ಜೈಲು ಬೇಕೇ? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಪ್ರಕರಣದಲ್ಲಿ ವಾದಿಸುತ್ತಿದ್ದ ವಕೀಲರು "ನಮಗೆ ಜಾಮೀನು ಬೇಕು" ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿಗಳು, "ಸರಿ...  ಧಾರ್ಮಿಕ ನಂಬಿಕೆಗಳ ಬಗ್ಗೆ ಅಷ್ಟಾಗಿ ನಂಬಿಕೆಗಳಿಲ್ಲವೆನೋ ಎಂದು ಉತ್ತರಿಸಿದರು. ಇನ್ನೂ... ಮತ್ತೊಂದು ಪ್ರಕರಣದಲ್ಲಿ  ಮುಖ್ಯ ನ್ಯಾಯಮೂರ್ತಿ ಬೊಬ್ಡೆ "ಮಹಾಭಾರತ"ವನ್ನು ಉಲ್ಲೇಖಿಸಿದರು.

ಸಿಎಎ ವಿರೋಧಿ ಪ್ರತಿಭಟನೆಯ ವಿಷಯದಲ್ಲಿ, ಡಾ.ಕಫಿಲ್ ಖಾನ್ ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಬಹುದೇ? ಅದನ್ನು ಪ್ರತ್ಯಕ್ಷ  ಹಾಜರಿ  ಎಂದು ಪರಿಗಣಿಸುತ್ತಿರಾ? ಎಂದು ವಕೀಲೆ ಇಂದಿರಾ ಜೈಸಿಂಗ್  ಪ್ರಶ್ನಿಸಿದರು. "ಮಹಾಭಾರತದ ಕಾಲದಿಂದಲೂ ವರ್ಚುವಲ್ ಹಿಯರಿಂಗ್ಸ್ ಎಂಬ ವ್ಯವಸ್ಥೆ ಇದೆ. ಮಹಾಭಾರತದಲ್ಲಿ "ಸಂಜಯ ಉವಾಚ" ಎಂದು ಇದೆಯಲ್ಲಾ... ಎಂದು ಸಿಜೆಐ  ಬೊಬ್ಡೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT