ರಿಯಾ ಚಕ್ರವರ್ತಿ 
ದೇಶ

ಸುಶಾಂತ್ ಸಿಂಗ್ ರಜಪೂತ್ ಸಾವು: ಸುಪ್ರೀಂ ಕೋರ್ಟ್ ನಲ್ಲಿ ರಿಯಾ ಚಕ್ರವರ್ತಿ, ಬಿಹಾರ ಸರ್ಕಾರ ಲಿಖಿತ ಹೇಳಿಕೆ ಸಲ್ಲಿಕೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು ಬಿಹಾರದ ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ನಟಿ ರಿಯಾ ಚಕ್ರವರ್ತಿ ಮತ್ತು ಬಿಹಾರ ಸರ್ಕಾರ ಲಿಖಿತ ಹೇಳಿಕೆಗಳನ್ನು ಸಲ್ಲಿಸಿದ್ದಾರೆ.

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು ಬಿಹಾರದ ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ನಟಿ ರಿಯಾ ಚಕ್ರವರ್ತಿ ಮತ್ತು ಬಿಹಾರ ಸರ್ಕಾರ ಲಿಖಿತ ಹೇಳಿಕೆಗಳನ್ನು ಸಲ್ಲಿಸಿದ್ದಾರೆ.

ರಿಯಾ ಚಕ್ರವರ್ತಿ ಅವರ ಮನವಿಯನ್ನು ತಿರಸ್ಕರಿಸಬೇಕೆಂದು ಸುಪ್ರೀಂ ಕೋರ್ಟ್ ನ್ನು ಇಂದು ಕೋರಿದ ಬಿಹಾರ ಸರ್ಕಾರ, ತನಿಖೆಯನ್ನು ತ್ವರಿತವಾಗಿ ಕೈಗೊಳ್ಳಲು ಮತ್ತು ಪೂರ್ಣಗೊಳಿಸಲು ಸಿಬಿಐಗೆ ಯಾವುದೂ ಅಡ್ಡವಾಗುವುದಿಲ್ಲ ಎಂದು ಹೇಳಿದೆ. 

ತಮ್ಮ ಕಾನೂನು ವ್ಯಾಪ್ತಿಗೆ ಬರದೆ ಬಿಹಾರ ಸರ್ಕಾರದ ಪರವಾಗಿ ಸಿಬಿಐ ತನಿಖೆಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಇನ್ನೊಂದೆಡೆ ರಿಯಾ ಚಕ್ರವರ್ತಿ ಲಿಖಿತ ಹೇಳಿಕೆಯನ್ನು ಇಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದಾರೆ. 

ಮೊನ್ನೆ ಆಗಸ್ಟ್ 11ರಂದು ರಿಯಾ ಚಕ್ರವರ್ತಿ ಸಲ್ಲಿಸಿದ್ದ ಮನವಿಯನ್ನು ಕಾಯ್ದಿರಿಸಿದ್ದ ಸುಪ್ರೀಂ ಕೋರ್ಟ್ ಇಂದಿನೊಳಗೆ ಸಂಬಂಧಪಟ್ಟವರು ಅರ್ಜಿ ಸಲ್ಲಿಸುವಂತೆ ಆದೇಶ ನೀಡಿತ್ತು. 

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದಾರೆ. ಸುಶಾಂತ್ ಸಿಂಗ್ ತಂದೆ ಕೃಷ್ಣ ಕಿಶೋರ್ ಸಿಂಗ್ ಪಾಟ್ನಾ ನ್ಯಾಯಾಲಯದಲ್ಲಿ ರಿಯಾ ಚಕ್ರವರ್ತಿ ಮತ್ತು ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿ ತಮ್ಮ ಮಗನ ಸಾವಿಗೆ ಪ್ರೇರೇಪಣೆ ನೀಡಿದ್ದರು ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!