ಮೋಹನ್ ಭಾಗವತ್ 
ದೇಶ

ಎಲ್ಲಾ ವಿದೇಶಿ ವಸ್ತುಗಳನ್ನು ಬಹಿಷ್ಕರಿಸುವುದು ಸ್ವದೇಶಿಯತೆ ಅಲ್ಲ: ಮೋಹನ್ ಭಾಗವತ್

ಸ್ವದೇಶಿ ಅಂದರೆ ಎಲ್ಲ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿಸುವುದು ಎಂಬ ಅರ್ಥವಲ್ಲ ಎಂದು ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅದೇ ವೇಳೆ ದೇಶದಲ್ಲಿ ಸಾಂಪ್ರದಾಯಿಕವಾಗಿ ಕೊರತೆಯಿರುವ, ಸ್ಥಳೀಯವಾಗಿ ಲಭ್ಯವಿಲ್ಲದ ತಂತ್ರಜ್ಞಾನಗಳು ಅಥವಾ ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ

ನವದೆಹಲಿ: ಸ್ವದೇಶಿ ಅಂದರೆ ಎಲ್ಲ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿಸುವುದು ಎಂಬ ಅರ್ಥವಲ್ಲ ಎಂದು ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅದೇ ವೇಳೆ ದೇಶದಲ್ಲಿ ಸಾಂಪ್ರದಾಯಿಕವಾಗಿ ಕೊರತೆಯಿರುವ, ಸ್ಥಳೀಯವಾಗಿ ಲಭ್ಯವಿಲ್ಲದ ತಂತ್ರಜ್ಞಾನಗಳು ಅಥವಾ ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. 

ಬುಧವಾರ ವರ್ಚುವಲ್ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಸ್ವಾವಲಂಬಿ ರಾಷ್ಟ್ರಗಳ ನಡುವೆ ಪರಸ್ಪರ ಸಹಕಾರ ಬೇಕಿದೆ. ಕೋವಿಡ್ 19 ನಂತರದ ಜಗತ್ತಿಗೆ ಜಗತ್ತನ್ನು ಒಂದು ಮಾರುಕಟ್ಟೆ ಎಂದಲ್ಲ ಒಂದು ಕುಟುಂಬ ಒಂದು ಪರಿಗಣಿಸುವ ಆರ್ಥಿಕ ಮಾದರಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಸ್ವಾವಲಂಬಿ ಭಾರತದ ನಿರ್ಧಾರಕ್ಕೆ ಬೆಂಬಲ ನೀಡಿದ ಆರ್‌ಎಸ್‌ಎಸ್ ಮುಖ್ಯಸ್ಥ, ಸ್ವದೇಶಿ ಎಂದರೆ ಸ್ಥಳೀಯ ಉತ್ಪನ್ನಗಳು, ತಂತ್ರಜ್ಞಾನಗಳಿಗೆ ಉತ್ತೇಜನ ನೀಡುವುದು ಮತ್ತು ಆದ್ಯತೆ ನೀಡುವುದು. ಹಾಗಂತ ಎಲ್ಲಾ ವಿದೇಶಿ ವಸ್ತುಗಳನ್ನು ಬಹಿಷ್ಕರಿಸಬೇಕಾಗಿಲ್ಲ. ಸ್ಥಳೀಯವಾಗಿ ಲಭ್ಯವಿಲ್ಲದ ವಸ್ತುಗಳು ಅಥವಾ ತಂತ್ರಜ್ಞಾನವನ್ನು ಮಾತ್ರ ಆಮದು ಮಾಡಿಕೊಳ್ಳಲೇಬೇಕು ಮತ್ತು ಈ ವಸ್ತುಗಳನ್ನು ನಾವು ಭಾರತಕ್ಕೆ ಒಪ್ಪುವ ರೀತಿಯಲ್ಲಿ ಬದಲಾವಣೆ ಮಾಡಬೇಕು. 

ಆಮದು ಮಾಡಿಕೊಂಡ ವಸ್ತುಗಳ ಮುಂದೆ ಸಾಂಪ್ರದಾಯಿಕವಾಗಿ ಲಭ್ಯವಿರುವ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳನ್ನು ಕಡೆಗಣಿಸುವ ಕೆಲವು ಉದಾಹರಣೆಗಳನ್ನು ನೀಡಿದ ಅವರು, ದೇಶೀಯ ವಸ್ತುಗಳನ್ನು ಕೀಳಾಗಿ ಕಾಣುವ ಮನಸ್ಥಿತಿ ಬದಲಾಗಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT