ಕೆಂಪು ಕೋಟೆಗೆ ಭದ್ರತಾ ಪಡೆ ಕಾವಲು 
ದೇಶ

ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಇಂದು ಹೇಗಿತ್ತು? 

ಮಾಸ್ಕ್ ಗಳನ್ನು ಹೊಂದಿದ್ದ ಕಿಟ್, ಹ್ಯಾಂಡ್ ಸ್ಯಾನಿಟೈಸರ್ ನ ಸಣ್ಣ ಬಾಟಲ್, ಗ್ಲೌಸ್ ಗಳನ್ನು ಎಲ್ಲಾ ಕುರ್ಚಿಗಳ ಮೇಲೆ ಇಡಲಾಗಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಈ ಕಿಟ್ ಗಳ ಮೂಲಕ ಸ್ಪಷ್ಟ ಸೂಚನೆ ನೀಡಲಾಗಿತ್ತು. ಇಂದು ಕೋವಿಡ್-19 ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಕಂಡುಬಂದ ದೃಶ್ಯ.

ನವದೆಹಲಿ: ಮಾಸ್ಕ್ ಗಳನ್ನು ಹೊಂದಿದ್ದ ಕಿಟ್, ಹ್ಯಾಂಡ್ ಸ್ಯಾನಿಟೈಸರ್ ನ ಸಣ್ಣ ಬಾಟಲ್, ಗ್ಲೌಸ್ ಗಳನ್ನು ಎಲ್ಲಾ ಕುರ್ಚಿಗಳ ಮೇಲೆ ಇಡಲಾಗಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಈ ಕಿಟ್ ಗಳ ಮೂಲಕ ಸ್ಪಷ್ಟ ಸೂಚನೆ ನೀಡಲಾಗಿತ್ತು. ಇಂದು ಕೋವಿಡ್-19 ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಕಂಡುಬಂದ ದೃಶ್ಯ.

ಸಾಮಾನ್ಯ ದಿನಗಳಲ್ಲಾದರೆ ಇಂದು ಕೆಂಪು ಕೋಟೆ ಬಳಿ ಜನಸಾಗರ. ಐತಿಹಾಸಿಕ ಕೆಂಪು ಕೋಟೆಯಲ್ಲಿ ನಡೆಯುವ ವಾರ್ಷಿಕ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಇಲ್ಲಿನ ಕಾರ್ಯಕ್ರಮ ನೋಡುವುದೇ ಚೆಂದ. ಆದರೆ ಈ ವರ್ಷ ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷತಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. 

ಈ ವರ್ಷ ಸುರಕ್ಷತೆ ಕ್ರಮ ಹೇಗಿತ್ತು?:ಮುಖ್ಯ ದ್ವಾರದಲ್ಲಿ ಸೀಮಿತ ಗಣ್ಯರನ್ನು ಮಾತ್ರ ಒಳಗೆ ಬಿಡಲಾಗುತ್ತಿತ್ತು. ಒಳಗೆ ಹೋಗುವವರನ್ನೆಲ್ಲ ಥರ್ಮಲ್ ಸ್ಕ್ರೀನಿಂಗ್ ಮಾಡಿ ಭದ್ರತಾ ಪಡೆ ಒಳಗೆ ಬಿಡುತ್ತಿದ್ದರು. ಭದ್ರತಾ ಸಿಬ್ಬಂದಿ ಪಿಪಿಇ ಕಿಟ್ ಧರಿಸಿದ್ದರು. ಸೆಕ್ಯುರಿಟಿ ಗೇಟ್ ಹತ್ತಿರ ಹ್ಯಾಂಡ್ ಸ್ಯಾನಿಟೈಸರ್ ಇಡಲಾಗಿತ್ತು. 

ಪ್ರತಿ ಆಸನದಲ್ಲಿ ಸ್ಯಾನಿಟೈಸರ್ ಕಿಟ್, ಕೈ ವಸ್ತ್ರಗಳನ್ನು ಸೀಟಿನ ಹಿಂದೆ ಕಾರ್ಯಕ್ರಮದ ಪ್ಯಾಂಪ್ಲೆಟ್ ಜೊತೆಗೆ ಇಡಲಾಗಿತ್ತು. ವಿವಿಐಪಿಗಳು ಕುಳಿತುಕೊಳ್ಳುವಲ್ಲಿ ಸಾಮಾಜಿಕ ಅಂತರ ನಿಯಮವನ್ನು ಅನುಸರಿಸಲಾಗಿತ್ತು.6 ಅಡಿ ಅಂತರ ಕಾಯ್ದುಕೊಂಡು ಮಾಸ್ಕ್ ಕಡ್ಡಾಯವಾಗಿ ಧರಿಸಿ ಎಂಬ ಸಂದೇಶ ಅಲ್ಲಲ್ಲಿ ಕಾಣಿಸುತ್ತಿತ್ತು.

ಬಂದಿದ್ದ ಗಣ್ಯರು, ಭದ್ರತಾ ಸಿಬ್ಬಂದಿ, ವಿಐಪಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ