ಸೋನಿಯಾ ಗಾಂಧಿ 
ದೇಶ

ಭಾರತೀಯ ಪ್ರಜಾಪ್ರಭುತ್ವ ಕುರಿತು ಆತ್ಮಾವಲೋಕನ ಸಂದರ್ಭ ಎದುರಾಗಿದೆ- ಸೋನಿಯಾ ಗಾಂಧಿ

 ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ  ಮೌಲ್ಯಗಳಿಗೆ ಮತ್ತು  ಸ್ಥಾಪಿತ ಸಂಪ್ರದಾಯಗಳಿಗೆ ವಿರುದ್ಧವಾಗಿ ನಿಂತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಭಾರತೀಯ ಪ್ರಜಾಪ್ರಭುತ್ವ ಕುರಿತು ಆತ್ಮಾವಲೋಕನ ಸಂದರ್ಭ ಎದುರಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಮತ್ತು  ಸ್ಥಾಪಿತ ಸಂಪ್ರದಾಯಗಳಿಗೆ ವಿರುದ್ಧವಾಗಿ ನಿಂತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,ಭಾರತೀಯ ಪ್ರಜಾಪ್ರಭುತ್ವ ಕುರಿತು ಆತ್ಮಾವಲೋಕನ ಸಂದರ್ಭ ಎದುರಾಗಿದೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನದ ಅಂಗವಾಗಿ ದೇಶದ ಜನತೆಗೆ ನೀಡಿರುವ ಸಂದೇಶದಲ್ಲಿ ಅವರು, ಸ್ವಾತಂತ್ರ್ಯ ಪಡೆದ ಕಳೆದ 74 ವರ್ಷಗಳಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು,ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಕಾಪಾಡಲು ಶ್ರಮಿಸಿದ್ದೇವೆ.ಆದರೆ,ಇಂದು,ಆಡಳಿತಾರೂಢ ಸರ್ಕಾರ, ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ತತ್ವಗಳಿಗೆ ಮತ್ತು ಸ್ಥಾಪಿತ ಸಂಪ್ರದಾಯಗಳಿಗೆ ವಿರುದ್ಧವಾಗಿ ನಿಂತಿರುವುದನ್ನು ಕಾಣುತ್ತಿದ್ದೇವೆ. ಆದ್ದರಿಂದ ಭಾರತೀಯ ಪ್ರಜಾಪ್ರಭುತ್ವದ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ಅರ್ಥವೇನು ಎಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ದೇಶದ ಜನರಿಗೆ ಕರೆ ನೀಡಿರುವ ಅವರು, ಇಂದು ಪ್ರತಿಯೊಬ್ಬ ದೇಶವಾಸಿಯೂ ಸ್ವಾತಂತ್ರ್ಯ ಎಂದರೆ ಏನು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ, ಪ್ರಶ್ನೆಗಳನ್ನು ಕೇಳುವುದಕ್ಕೆ, ಅಭಿಪ್ರಾಯಗಳನ್ನು ಮಂಡಿಸುವುದಕ್ಕೆ ಸ್ವಾತಂತ್ರ್ಯವಿದೆಯೇ ಎಂಬುದನ್ನು ಎಲ್ಲರೂ ಮನಗಾಣಬೇಕಿದೆ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾಂಗ್ರೆಸ್, ಭಾರತೀಯರ ಪ್ರಜಾಪ್ರಭುತ್ವ ರುಜುವಾತುಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT