ಸಂಗ್ರಹ ಚಿತ್ರ 
ದೇಶ

ಗಡಿ ವಿಚಾರವಾಗಿ ಚೀನಾ ಹೆಸರು ಹೇಳಲು ಸರ್ಕಾರಕ್ಕೆ ಭಯವೇಕೆ: ಕಾಂಗ್ರೆಸ್‌

74ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ಮಾಡಿದ್ದ ಭಾಷಣದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಅಧಿಕಾರದಲ್ಲಿ ಕುಳಿತವರಿಗೆ ಚೀನಾ ಹೆಸರು ಹೇಳಲು ಭಯವೇಕೆ ಎಂದು ಟೀಕಿಸಿದೆ.

ನವದೆಹಲಿ: 74ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ಮಾಡಿದ್ದ ಭಾಷಣದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಅಧಿಕಾರದಲ್ಲಿ ಕುಳಿತವರಿಗೆ ಚೀನಾ ಹೆಸರು ಹೇಳಲು ಭಯವೇಕೆ ಎಂದು ಟೀಕಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ, 'ಭಾರತದ ಭೂಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ ಚೀನಾ ಹೆಸರು ಹೇಳಲು ಅಧಿಕಾರದಲ್ಲಿ ಕುಳಿತವರು ಏಕೆ ಹೆದರುತಿದ್ದಾರೆ. ಭಾರತದ ಸಾರ್ವಭೌಮತ್ವದ ಮೇಲೆ ಕಣ್ಣು ಹಾಕಿದವರಿಗೆ ಗಡಿ ಭಾರತೀಯ ಸೈನಿಕರು ಗಡಿ ನಿಯಂತ್ರಣಾ ರೇಖೆಯಿಂದ ಹಿಡಿದು, ವಾಸ್ತವ ಗಡಿ ನಿಯಂತ್ರಣಾ ರೇಖೆಯ ವರೆಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ, ಚೀನಾದ ಹೆಸರನ್ನೇ ಉಲ್ಲೇಖಿಸಲಿಲ್ಲ. ದೇಶದ ಸಾರ್ವಭೌಮತ್ವವನ್ನು ಕಾಪಾಡುವಲ್ಲಿ ಇಡೀ ದೇಶವೇ ಒಗ್ಗಟ್ಟಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಮತ್ತು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುತ್ತಾನೆ ಎಂದು ಹೇಳಿದ್ದಾರೆ.

ಅಂತೆಯೇ 'ದೇಶವನ್ನು ರಕ್ಷಿಸಲು ಮತ್ತು ಚೀನಾವನ್ನು ಹಿಂದಕ್ಕೆ ತಳ್ಳಲು ಸರ್ಕಾರ ಏನು ಮಾಡುತ್ತಿದೆ ಎಂದು ಪ್ರತಿಯೊಬ್ಬ ಭಾರತೀಯರು ಈ ಸ್ವಾತಂತ್ರ್ಯ ದಿನಾಚರಣೆ ದಿನ ಸರ್ಕಾರವನ್ನು ಕೇಳಬೇಕಿದೆ. ನಮ್ಮ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದೆಯೇ, ಜನರ ಆದೇಶದ ಮೇಲೆ ಸರ್ಕಾರಕ್ಕೆ ವಿಶ್ವಾಸವಿದೆಯೇ?, ದೇಶದಲ್ಲಿ ಮುಕ್ತವಾಗಿ ಮಾತನಾಡುವ ಸ್ವಾತಂತ್ರ್ಯವಿದೆಯೇ? ಎಂದು ಪ್ರಶ್ನಿಸುವುದೂ ಈ ಸಂದರ್ಭದಲ್ಲಿ ಮುಖ್ಯವಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಮತ್ತು ದೇಶದ 130 ಕೋಟಿ ಜನ ಹೆಮ್ಮೆ ಪಡುತ್ತಾರೆ ಎಂದು ಸುರ್ಜೇವಾಲಾ  ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್