ಯೋಗ ಗುರು ರಾಮ್ ದೇವ್ 
ದೇಶ

ದೇಶದಲ್ಲಿ ಕೋವಿಡ್-ಚೇತರಿಕೆ ಪ್ರಮಾಣ ಹೆಚ್ಚಾಗಲು ಯೋಗ ಕಾರಣ- ರಾಮ್ ದೇವ್

ಭಾರತೀಯ ಜನತೆ ಯೋಗ ಮಾಡುವುದರಿಂದ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಾಂಪ್ರಾದಾಯಿಕ ಪದ್ಧತಿ ಅನುಸರಿಸುತ್ತಿರುವುದರಿಂದ ಕೋವಿಡ್-19 ಚೇತರಿಕೆ ಪ್ರಮಾಣ ಏರಿಕೆಯಾಗಿದ್ದು, ಮರಣ ಪ್ರಮಾಣ ಕಡಿಮೆಯಾಗಿದೆಎಂದು ಯೋಗ ಗುರು ರಾಮ್ ದೇವ್ ಹೇಳಿದ್ದಾರೆ.

ಹರಿದ್ವಾರ: ಭಾರತೀಯ ಜನತೆ ಯೋಗ ಮಾಡುವುದರಿಂದ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಾಂಪ್ರಾದಾಯಿಕ ಪದ್ಧತಿ ಅನುಸರಿಸುತ್ತಿರುವುದರಿಂದ ಕೋವಿಡ್-19 ಚೇತರಿಕೆ ಪ್ರಮಾಣ ಏರಿಕೆಯಾಗಿದ್ದು, ಮರಣ ಪ್ರಮಾಣ ಕಡಿಮೆಯಾಗಿದೆ
ಎಂದು ಯೋಗ ಗುರು ರಾಮ್ ದೇವ್ ಹೇಳಿದ್ದಾರೆ.

ಪಂತಜಲಿ ಯೋಗ ಪೀಠದಲ್ಲಿ ನಡೆದ 74ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮ್ ದೇವ್, ದೇಶದಲ್ಲಿ  ಜನರು ಯೋಗ ಮಾಡುತ್ತಿದ್ದು, ಸಾಂಪ್ರದಾಯಿಕ ಪದ್ದತಿ ಅನುಸರಿಸುತ್ತಿರುವುದರಿಂದ
ದಿನದಿಂದ ದಿನಕ್ಕೆ ಕೋವಿಡ್-19 ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿದ್ದು, ಮರಣ ಪ್ರಮಾಣ ಇಳಿಕೆಯಾಗುತ್ತಿದೆ ಎಂದರು.

ಪ್ರಕೃತಿ ಚಿಕಿತ್ಸಾ ಪದ್ಧತಿ ಅಭಿವೃದ್ಧಿ ಮತ್ತು ಆಯುರ್ವೇದ ಚಿಕಿತ್ಸೆಯನ್ನು ಮುಂಚೂಣಿ ಚಿಕಿತ್ಸೆಯನ್ನಾಗಿ ಮಾಡಲು ಶಪತ ಮಾಡಬೇಕಾಗಿದೆ. ಅಲೋಪಥಿಕ್ ಚಿಕಿತ್ಸಾ ಪದ್ಧತಿಗೆ ಬದಲಿಗೆ ಆಯುರ್ವೇದಿಕ್ ಪದ್ಧತಿ ನಮ್ಮ ಗುರಿಯಬೇಕು,ಆಗ ದೇಶಕ್ಕೆ ನಿಜವಾದ ಸ್ವಾತಂತ್ಯವಾಗಲಿದೆ ಎಂದು ಅವರು ಹೇಳಿದರು.

ರಷ್ಯಾದ ಕೋವಿಡ್-19 ಲಸಿಕೆ ಕುರಿತಂತೆ ಪ್ರತಿಕ್ರಿಯಿಸಿದ ರಾಮ್ ದೇವ್, ಬೇರೆ ಬೇರೆ ರಾಷ್ಟ್ರಗಳ ಲಸಿಕೆ ದಕ್ಷತೆ ಬಗ್ಗೆ ತಿಳಿಯಬೇಕಾಗಿದೆ. ಅವುಗಳಿಂದ ಅಡ್ಡ ಪರಿಣಾಮ ಉಂಟಾಗುವ  ಸಾಧ್ಯತೆಯಿದೆ. ಅದು ಮುೂರರಿಂದ ಐದು ವರ್ಷಗಳಲ್ಲಿ ಗೊತ್ತಾಗಲಿದೆ ಎಂದರು.

ಪಂತಂಜಲಿ ಆಯುರ್ವೇದಿಕ್ ಸ್ವಸಾರಿ ಕೊರೊನಿಲ್ ಕಿಟ್ ನಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ. ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!