ಬಿಜೆಪಿ ಕಾರ್ಯಕರ್ತನ ಮೃತದೇಹ ಇರಿಸಿ ಪ್ರತಿಭಟನೆ 
ದೇಶ

ಧ್ವಜಾರೋಹಣ ವಿಚಾರದಲ್ಲಿ ಘರ್ಷಣೆ: ಪ.ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ, ಟಿಎಂಸಿ ಭಾಗಿ ಶಂಕೆ 

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸಿದ ವಿಚಾರದಲ್ಲಿ ಕಲಹ ನಡೆದು ಬಿಜೆಪಿ ಕಾರ್ಯಕರ್ತರೊಬ್ಬರನ್ನು ಟಿಎಂಸಿ ಬೆಂಬಲಿಗರು ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸಿದ ವಿಚಾರದಲ್ಲಿ ಕಲಹ ನಡೆದು ಬಿಜೆಪಿ ಕಾರ್ಯಕರ್ತರೊಬ್ಬರನ್ನು ಟಿಎಂಸಿ ಬೆಂಬಲಿಗರು ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹತ್ಯೆಗೊಂಡ ಬಿಜೆಪಿ ಕಾರ್ಯಕರ್ತ 40 ವರ್ಷದ ಸುದರ್ಶನ್ ಪ್ರಾಮಾಣಿಕ್ ಎಂಬುವವರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ನಿನ್ನೆ ಅಪರಾಹ್ನ ಹೂಗ್ಲಿ ಜಿಲ್ಲೆಯ ಖನಕುಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 
ಧ್ವಜಾರೋಹಣ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಮಾತಿಗೆ ಮಾತು ಬೆಳೆದು ಅದು ಕೊಲೆಯಲ್ಲಿ ಅಂತ್ಯವಾಗಿದೆ. ಓರ್ವ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದು ನಾವು 8 ಮಂದಿಯನ್ನು ಬಂಧಿಸಿದ್ದೇವೆ. ತನಿಖೆ ಆರಂಭಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಆದರೆ ಟಿಎಂಸಿ ಆರೋಪವನ್ನು ನಿರಾಕರಿಸಿದೆ. 

ಖಾನಕುಲ್ ಪ್ರದೇಶದಲ್ಲಿ ಧ್ವಜ ಹಾರಿಸಿದ್ದಕ್ಕೆ ಟಿಎಂಸಿ ಕಾರ್ಯಕರ್ತರು ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿ ಕೊಂದು ಹಾಕಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ದಿನ ಕೂಡ ನಮ್ಮ ಕಾರ್ಯಕರ್ತರನ್ನು ಅವರು ಸುಮ್ಮನೆ ಬಿಟ್ಟಿಲ್ಲ, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಆದರೆ ಟಿಎಂಸಿ ಆರೋಪವನ್ನು ನಿರಾಕರಿಸಿದೆ. ಪಕ್ಷದ ವಕ್ತಾರ ಪ್ರಬಿರ್ ಘೋಸಲ್, ಬಿಜೆಪಿಯೊಳಗಿನ ಜಗಳದಿಂದಾಗಿ ಕಾರ್ಯಕರ್ತ ಮೃತಪಟ್ಟಿದ್ದಾರೆ. ಇದರಲ್ಲಿ ಟಿಎಂಸಿ ಕಾರ್ಯಕರ್ತರ ಪಾತ್ರವೇನೂ ಇಲ್ಲ ಎಂದಿದ್ದಾರೆ. 

ಘರ್ಷಣಾ ನಿರತ ಗುಂಪನ್ನು ಚದುರಿಸಿ ಪರಿಸ್ಥಿತಿ ಶಾಂತಗೊಳಿಸಲು ಪೊಲೀಸರು ಬಂದು ಲಾಠಿಚಾರ್ಜ್ ನಡೆಸಬೇಕಾಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: 3ನೇ ದಿನಕ್ಕೆ ಕಾಲಿಟ್ಟ 'Cockroach Janta Party' ಪ್ರತಿಭಟನೆ, ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ..!

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಆಡಳಿತಾರೂಢ ಮಹಾಯುತಿಗೆ 17 ಸ್ಥಾನದಲ್ಲಿ 16 ಸ್ಥಾನ!

ಸ್ವಿಟ್ಜರ್ಲೆಂಡ್‌ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!

ಆಯುಷ್ಮಾನ್ ವಿಮೆ ಅಲ್ಲ ಭರವಸೆ ಯೋಜನೆ, ಜನಔಷಧಿ ಕೇಂದ್ರಗಳ ಸರಿಪಡಿಸಬೇಕು: ಸಚಿವ ಯು.ಟಿ. ಖಾದರ್‌ (INTERVIEW)