ಸಾಂದರ್ಭಿಕ ಚಿತ್ರ 
ದೇಶ

ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದು ವೈದ್ಯೆ ನೇಣಿಗೆ ಶರಣು

ವೈದ್ಯರೊಬ್ಬರು ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ನಾಗಪುರ:  ವೈದ್ಯರೊಬ್ಬರು ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಡಾ. ಸುಷ್ಮಾ ರಾಣೆ, ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ಪತಿ ಧೀರಜ್ (42) ಮತ್ತು ಅವರ 11 ಮತ್ತು 5 ವರ್ಷದ ಇಬ್ಬರು ಮಕ್ಕಳು ನಾಗಪುರದ ಕೊರಡಿ ಪ್ರದೇಶದಲ್ಲಿರುವ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಧೀರಜ್ ಮತ್ತು ಮಕ್ಕಳ ಮೃತದೇಹಗಳು ಮಾಸ್ಟರ್ ಬೆಡ್‌ರೂಂನ ಹಾಸಿಗೆಯ ಮೇಲೆ ಪತ್ತೆಯಾಗಿದ್ದರೆ, ವೈದ್ಯರ ಮೃತದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಕೊರಡಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ವೈದ್ಯ ಕುಟುಂಬದ ಜೊತೆ ವಾಸವಾಗಿದ್ದ ಮೃತನ 60 ವರ್ಷದ ಚಿಕ್ಕಮ್ಮ  ಬೆಡ್ ರೂಂ ಬಾಗಿಲು ಬಡಿದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಸಾವಿಗೀಡಾಗಿರುವುದು ಬೆಳಕಿಗೆ ಬಂದಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. 

ಘಟನಾ ಸ್ಥಳದಿಂದ ಪೊಲೀಸರು, ಎರಡು ಸಿರಿಂಜ್ ಮತ್ತು ಡೆತ್‌ನೋಟ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಸುಷ್ಮಾ ಅವರು  ಯಾವುದೋ ವಿಚಾರಕ್ಕೆ ಅಸಮಾಧಾನಗೊಂಡಿದ್ದರಿಂದಾಗಿ ಈ ರೀತಿಯ ಹೆಜ್ಜೆಯನ್ನು ಇಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

IPL 2026: ಸ್ಟಂಪೌಟ್ ಮಾಡಿದ Sanju Samson ವಿರುದ್ಧ Klaasen ಆಕ್ರೋಶ, ಮೈದಾನದಲ್ಲೇ ಹೈಡ್ರಾಮಾ, ಆಗಿದ್ದೇನು?

ಸಿಎಂ ಸುವೇಂದು ಅಧಿಕಾರಿ ಪಿಎ ಕೊಲೆ ಕೇಸ್: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧಿಸಿದ CBI

IPL 2026: SRH ಗೆಲುವಿನ ದಡ ಸೇರಿಸಿದ Ishan Kishan, ತವರಿನಲ್ಲೇ CSKಗೆ ಮುಖಭಂಗ, ಪ್ಲೇಆಫ್ ನಿಂದ ಬಹುತೇಕ ಔಟ್!

SCROLL FOR NEXT