ಛಾವಣಿ ಕುಸಿದುಬಿದ್ದ ಗುಡಿಸಲು 
ದೇಶ

ತೆಲಂಗಾಣ: ಮಣ್ಣಿನ ಗುಡಿಸಲಿನ ಛಾವಣಿ ಕುಸಿದು ಬಿದ್ದು ತಾಯಿ-ಮಕ್ಕಳು ಸ್ಥಳದಲ್ಲಿಯೇ ಸಾವು

ಸತತ ಮಳೆಯಿಂದ ಮಣ್ಣಿನ ಗೋಡೆಯ ಗುಡಿಸಲಿನ ಛಾವಣಿ ಕುಸಿದು ಬಿದ್ದು ತಾಯಿ ಮತ್ತು ಆಕೆಯ ಇಬ್ಬರು ಪುತ್ರಿಯರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ಮೆಹಬೂಬ್ ನಗರ ಜಿಲ್ಲೆಯ ಪಗಿದ್ಯಾಲ ಗ್ರಾಮದಲ್ಲಿ ನಡೆದಿದೆ.

ಮೆಹಬೂಬ್ ನಗರ: ಸತತ ಮಳೆಯಿಂದ ಮಣ್ಣಿನ ಗೋಡೆಯ ಗುಡಿಸಲಿನ ಛಾವಣಿ ಕುಸಿದು ಬಿದ್ದು ತಾಯಿ ಮತ್ತು ಆಕೆಯ ಇಬ್ಬರು ಪುತ್ರಿಯರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ಮೆಹಬೂಬ್ ನಗರ ಜಿಲ್ಲೆಯ ಪಗಿದ್ಯಾಲ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು 45 ವರ್ಷದ ಶರಣಮ್ಮ ಮತ್ತು ಆಕೆಯ ಪುತ್ರಿಯರಾದ 14 ವರ್ಷದ ವೈಶಾಲಿ ಮತ್ತು 12 ವರ್ಷದ ಭವಾನಿ ಎಂದು ಗುರುತಿಸಲಾಗಿದೆ. 

ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ತೀವ್ರ ಮಳೆ ಸುರಿಯುತ್ತಿತ್ತು. ಇದರಿಂದ ಹಳೆ ಗುಡಿಸಲಿನ ಛಾವಣಿ ಕುಸಿದುಬಿದ್ದು ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಮ ರಾಜೇಶ್ವರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 

ಶರಣಮ್ಮಳ ಪತಿ ಮಲ್ಲಪ್ಪ ದುರ್ಘಟನೆಯಲ್ಲಿ ಬಚಾವಾಗಿದ್ದು ಈ ವೇಳೆ ಅವರು ಮನೆಯ ಹೊರಗೆ ಮಲಗಿದ್ದರು. ಮೃತಪಟ್ಟವರ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT