ದೇಶ

ಸುಶಾಂತ್ ಸಾವು ಪ್ರಕರಣ: ಸುಪ್ರೀಂ ಆದೇಶ ಕುರಿತು ಪ್ರತಿಕ್ರಿಯಿಸುವುದು ಸೂಕ್ತವಲ್ಲ: ರಾವತ್

Manjula VN

ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶದ ಬಗ್ಗೆ ರಾಜಕೀಯ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬುಧವಾರ ಹೇಳಿದ್ದಾರೆ. 

ಸುಪ್ರೀಂಕೋರ್ಟ್ ತನ್ನ ಆದೇಶವನ್ನು ನೀಡಿದೆ. ಆದೇಶದ ಬಗ್ಗೆ ರಾಜಕೀಯವಾಗಿ ಹೇಳಿಕೆ ನೀಡುವುದು ಸರಿಯಲ್ಲ ದೇಶದಲ್ಲಿಯೇ ನಮ್ಮ ನ್ಯಾಯಾಂಗ ವ್ಯವಸ್ಥೆ ಉತ್ತಮ ಸ್ಥಾನದಲ್ಲಿದೆ. ಕಾನೂನಿಗಿಂತಲೂ ದೊಡ್ಡವರು ಯಾರೂ ಇಲ್ಲ. ಪ್ರತೀಯೊಬ್ಬರಿಗೂ ನ್ಯಾಯ ದೊರಕಬೇಕಿದೆ ಎಂದು ಹೇಳಿದ್ದಾರೆ. 

ಕಾನೂನಿನ ಬಗ್ಗೆ ತಿಳಿದವರು ಮುಂಬೈ ಪೊಲೀಸ್ ಆಯುಕ್ತರಾಗಲೀ ಅಥವಾ ನಮ್ಮ ವಕೀಲರು ಈ ಬಗ್ಗೆ ಮಾತನಾಡುತ್ತಾರೆ. ಸುಪ್ರೀಂಕೋರ್ಟ್ ಆದೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ. 

SCROLL FOR NEXT