ಸುಶಾಂತ್ ಸಿಂಗ್ ರಜಪೂತ್ 
ದೇಶ

ಸುಶಾಂತ್ ಸಿಂಗ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ- ತೀರ್ಪು ಸ್ವಾಗತಿಸಿದ ಬಾಲಿವುಡ್

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ವಹಿಸಿ ಮಹತ್ವದ ಆದೇಶ ಹೊರಡಿಸಿದ್ದು, ನ್ಯಾಯಾಲಯದ ತೀರ್ಪವನ್ನು ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಸ್ವಾಗತಿಸಿದ್ದಾರೆ. 

ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ವಹಿಸಿ ಮಹತ್ವದ ಆದೇಶ ಹೊರಡಿಸಿದ್ದು, ನ್ಯಾಯಾಲಯದ ತೀರ್ಪವನ್ನು ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಸ್ವಾಗತಿಸಿದ್ದಾರೆ. 

ಸುಪ್ರೀಂಕೋರ್ಟ್ ತೀರ್ಪು ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ನಟಿ ಪರಿಣಿತಿ ಚೋಪ್ರಾ ಅವರು, ನ್ಯಾಯಾಲಯದ ಆದೇಶ ಧನಾತ್ಮಕ ಬೆಳವಣಿಗೆಯಾಗಿದೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಈಗಲಾದರು ಜನರು ವದಂತಿ ಹಬ್ಬುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. 

ನಿರ್ಮಾಪಕ ಅಶೋಕ್ ಪಂಡಿತ್ ಅವರು ಟ್ವೀಟ್ ಮಾಡಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದ ಸುಶಾಂತ್ ಕುಟುಂಬಸ್ಥರಿಗೆ ಹಾಗೂ ಕೋಟ್ಯಾಂತರ ಭಾರತೀಯರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 

ನಟ ತುಶಾರ್ ಕಪೂರ್ ಟ್ವೀಟ್ ಮಾಡಿದ, ಶೀಘ್ರದಲ್ಲೇ ಸತ್ಯಾಸತ್ಯತೆಗಳು ಬಹಿರಂಗಗೊಳ್ಳಲಿದೆ. ಸುಶಾಂತ್ ಆತ್ಮಹತ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ. 

ತೀರ್ಪನ್ನು ಸುಶಾಂತ್‌ ಸೋದರಿ ಮೀತು ಸಿಂಗ್‌, ನಟಿ ಅಂಕಿಯಾ ಲೋಖಂಡೆ, ಕಂಗನಾ ರನೌತ್ ಸೇರಿದಂತೆ ಹಲವು ಮಂದಿ ತೀರ್ಪು ಸ್ವಾಗತಿಸಿ ಟ್ವೀಟಿಸಿದ್ದಾರೆ.

ಈ ನಡುವೆ ಸುಪ್ರೀಂ ಕೋರ್ಟ್‌ ಆದೇಶ ಪ್ರಕಟವಾಗುತ್ತಿದ್ದಂತೆಯೇ ಸಿಬಿಐ ಟೇಕ್ಸ್‌ ಓವರ್‌ ಹ್ಯಾಷ್‌ ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT