ಯಶವಂತ್ ಸಿನ್ಹಾ 
ದೇಶ

ಚುನಾವಣೆ ಮುಂದೂಡದಿದ್ದರೇ ಮತಗಟ್ಟೆಗಳು ಕೊರೋನಾ ಕೇಂದ್ರಗಳಾಗಲಿವೆ: ಯಶವಂತಾ ಸಿನ್ಹಾ

ದೇಶದೆಲ್ಲೆಡೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕು ಎಂದು ಮಾಜಿ ಕೇಂದ್ರ ಸಚಿವ ಯಶವಂತಾ ಸಿನ್ಹಾ ಆಗ್ರಹಿಸಿದ್ದಾರೆ.

ಪಾಟ್ನಾ: ದೇಶದೆಲ್ಲೆಡೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕು ಎಂದು ಮಾಜಿ ಕೇಂದ್ರ ಸಚಿವ ಯಶವಂತಾ ಸಿನ್ಹಾ ಆಗ್ರಹಿಸಿದ್ದಾರೆ.

ಕೊರೋನಾದಿಂದಾಗಿ ರಾಜಕೀಯ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದರೆ, ಚುನಾವಣೆಯನ್ನು ಮುಂದೂಡಲು ಯಾವುದೇ ಕ್ರಮವನ್ನು ಕೈಗೊಂಡಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಲದೇ ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಈ ಅವಧಿಯಲ್ಲಿ ಚುನಾವಣೆ ನಡೆಸಿದರೆ ಮತಗಟ್ಟೆಗಳು ಕೊರೋನಾ ಕೇಂದ್ರಗಳಾಗಿ ಬದಲಾಗಬಹುದು, ಆಗ ಕೊರೋನಾ ಎಷ್ಟು ಪ್ರಮಾಣದಲ್ಲಿ ಹರಡಿದೆ ಎಂಬುದನ್ನು ಅಂದಾಜಿಸುವುದು ಬಹಳ ಕಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬಿಹಾರ ಸರ್ಕಾರವು ಚುನಾವಣಾ ಆಯೋಗದ ಮುಂದೆ ಕೊರೋನಾ ಪ್ರಕರಣಗಳು ಕಡಿಮೆಯಿದೆ ಎಂದು ತೋರಿಸಲು ನಿಜವಾದ ಅಂಕಿಅಂಶಗಳನ್ನು ಮರೆಮಾಚುತ್ತಿವೆ ಎಂದು ಆರೋಪಿಸಿರುವ ಸಿನ್ಹಾ, ಒಂದು ವೇಳೆ ನವೆಂಬರ್ ಅಂತ್ಯದ ಬಳಿಕ ಚುನಾವಣೆ ನಡೆದರೆ ಬಿಹಾರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಬರಬಹುದು. ಆಗ  ಮುಖ್ಯಮಂತ್ರಿ ಸ್ಥಾನ
ತ್ಯಜಿಸಬೇಕಾಗಬಹುದು ಎಂಬ ಭಯದಿಂದ ನಿತಿಶ್ ಕುಮಾರ್ ಚುನಾವಣೆ ಮುಂದೂಡಲು ಮನಸ್ಸು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT