ತೆಲಂಗಾಣ: ಶ್ರೀಶೈಲಂ ಪವರ್ಸ್ಟೇಷನ್ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಪ್ಯಾನೆಲ್ ಬೋರ್ಡ್ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್ನಲ್ಲಿದ್ದ 10 ಮಂದಿ ಟನೆಲ್ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ.
ಘಟನೆ ನಡೆದಾಗ ಒಟ್ಟು 19 ಮಂದಿ ಒಳಗಿದ್ದರು, ಅದರಲ್ಲಿ 10 ಮಂದಿ ರಕ್ಷಿಸಲಾಗಿದ್ದು, ಉಳಿದ 9 ಜನರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ, ಶ್ರೀಶೈಲಂ ಪವರ್ ಸ್ಟೇಷನ್ನ 6 ಯೂನಿಟ್ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ.
ತೆಲಂಗಾಣದ ಶ್ರೀಶೈಲಂ ಪವರ್ಸ್ಟೇಷನ್ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಪ್ಯಾನೆಲ್ ಬೋರ್ಡ್ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್ನಲ್ಲಿದ್ದ 10 ಮಂದಿ ಟನೆಲ್ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ. ಘಟನೆ ನಡೆದಾಗ ಒಟ್ಟು 19 ಮಂದಿ ಒಳಗಿದ್ದರು, ಅದರಲ್ಲಿ 10 ಮಂದಿ ರಕ್ಷಿಸಲಾಗಿದ್ದು, ಉಳಿದ 9 ಜನರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ, ಶ್ರೀಶೈಲಂ ಪವರ್ ಸ್ಟೇಷನ್ನ 6 ಯೂನಿಟ್ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ.