ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಪಂಜಾಬಿನಲ್ಲಿ ಸೆಕ್ಷನ್ 144 ಹೇರಲು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ

ಪಂಜಾಬ್ ರಾಜ್ಯದಲ್ಲಿ  ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಸೆಕ್ಷನ್ 144ರ ಅಡಿಯಲ್ಲಿ ನಾಲ್ಕು ಜನರಿಗಿಂತ ಹೆಚ್ಚು ಜನ ಒಂದೆಡೆ ಸೇರದಂತಹ ನಿರ್ಬಂಧವನ್ನು ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಜಾರಿಗೊಳಿಸಿದ್ದಾರೆ.

ಚಂಢೀಗಡ: ಪಂಜಾಬ್ ರಾಜ್ಯದಲ್ಲಿ  ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಸೆಕ್ಷನ್ 144ರ ಅಡಿಯಲ್ಲಿ ನಾಲ್ಕು ಜನರಿಗಿಂತ ಹೆಚ್ಚು ಜನ ಒಂದೆಡೆ ಸೇರದಂತಹ ನಿರ್ಬಂಧವನ್ನು ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಜಾರಿಗೊಳಿಸಿದ್ದಾರೆ. 

ವಿವಾಹ ಮತ್ತು 'ಬೋಗ್' ಸಮಾರಂಭಗಳಿಗೆ ನಿರ್ಬಂಧ ಆದೇಶದಿಂದ ವಿನಾಯಿತಿ ನೀಡಲಾಗಿದೆ.ನಿಯಮ ಉಲ್ಲಂಘಿಸುವ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕೊರೋನಾವೈರಸ್ ಹೆಚ್ಚಾಗುತ್ತಿರುವಂತೆ ಆಗಸ್ಟ್ 31ರವರೆಗೂ ಲಾಕ್ ಡೌನ್ ನಿರ್ಬಂಧ ಘೋಷಿಸಿದ ಒಂದು ದಿನದ ನಂತರ ಹೊಸದಾದ ನಿರ್ಬಂಧವನ್ನು ಕ್ಯಾಪ್ಟನ್ ಅಮರೀಂದರ್ ಸಿಂಗ್ ಪ್ರಕಟಿಸಿದ್ದಾರೆ.

ಪಂಜಾಬಿನ ಎಲ್ಲಾ 167 ನಗರಗಳು ಮತ್ತು ಪಟ್ಟಣಗಳಲ್ಲಿ ರಾತ್ರಿ ಕರ್ಫ್ಯೂವನ್ನು ಎರಡು ಗಂಟೆಗಳ ಅವಧಿ ಹೆಚ್ಚಿಸಿ ಗುರುವಾರ ಪಂಜಾಬ್ ಸರ್ಕಾರ ಆದೇಶ ಹೊರಡಿಸಿತ್ತು. ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣ ಹಾಗೂ ರಾಜ್ಯದ ಜನರ ಪ್ರಾಣ ಉಳಿವಿಗೆ ಅಗತ್ಯವಾದರೆ ಆಗಸ್ಟ್ 31ರ ನಂತರವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ರಾಜಕೀಯ ಪಕ್ಷಗಳು,ಪ್ರತಿಭಟನೆ, ಸಭೆ, ಸಮಾರಂಭ ನಡೆಸದಂತೆ ಮುಖ್ಯಮಂತ್ರಿ ಮನವಿ ಮಾಡಿಕೊಂಡಿದ್ದಾರೆ.

ಒಂದು ವೇಳೆ 144 ಸೆಕ್ಷನ್ ಉಲ್ಲಂಘಟನೆ ಕಂಡುಬಂದಲ್ಲಿ, ಜನರನ್ನು ಸೇರಿಸುವ ಅಥವಾ ಮಾಸ್ಕ್ ಇಲ್ಲದೆ ಜನರು ಒಂದೆಡೆ ಸೇರುವಂತೆ ಮಾಡುವ ಆಯೋಜಕರನ್ನು ಬಂಧಿಸಲಾಗುವುದು ಎಂದು ಅವರು ಅಧಿಕೃತವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT