ಸಂಗ್ರಹ ಚಿತ್ರ 
ದೇಶ

ರಹಸ್ಯವಾಗಿ ಮದುವೆಯಾಗಿ 1 ವರ್ಷ ಸಂಸಾರ ನಡೆಸಿ ಓಡಿ ಹೋಗಿದ್ದ ಬೆಂಗಳೂರು ಟೆಕ್ಕಿ ಬಂಧನ, 10 ಲಕ್ಷ ಆಮಿಷ!

ತಂದೆ ತಾಯಿಗೆ ತಿಳಿಯದಂತೆ ಟೆಕ್ಕಿಯೊಂದಿಗೆ ಮದುವೆ ಮಾಡಿಕೊಂಡು 1 ವರ್ಷಗಳ ಕಾಲ ಸಂಸಾರ ನಡೆಸಿದ್ದ ಯುವತಿಯೋರ್ವಳು ಇದೀಗ ತನಗೆ ಅನ್ಯಾಯವಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. 

ಹೈದರಾಬಾದ್: ತಂದೆ ತಾಯಿಗೆ ತಿಳಿಯದಂತೆ ಟೆಕ್ಕಿಯೊಂದಿಗೆ ಮದುವೆ ಮಾಡಿಕೊಂಡು 1 ವರ್ಷಗಳ ಕಾಲ ಸಂಸಾರ ನಡೆಸಿದ್ದ ಯುವತಿಯೋರ್ವಳು ಇದೀಗ ತನಗೆ ಅನ್ಯಾಯವಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. 

ಹೈದರಾಬಾದ್ ನ ನಾಗಾರ್ಜಿನ ಕಾಲೋನಿಯ ನಿವಾಸಿ 30 ವರ್ಷದ ಎಸ್ ಪವನ್ ಎಂಬಾತ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. 2017ರಲ್ಲಿ ಈತ ಯುವತಿಯೊರ್ವಳನ್ನು ಪ್ರೀತಿಸಿ ಮದುವೆಯಾಗಿದ್ದಾನೆ. 

ನಂತರ 1 ವರ್ಷಗಳ ಕಾಲ ಆಕೆ ಜೊತೆ ಪವನ್ ಗುಟ್ಟಾಗಿ ಸಂಸಾರ ನಡೆಸಿದ್ದಾನೆ. ನಂತರ ಆಕೆಯನ್ನು ಹೈದರಾಬಾದ್ ನ ತವರು ಮನೆಯಲ್ಲಿ ಇರುವಂತೆ. ಈ ವೇಳೆ ತನ್ನ ಪೋಷಕರನ್ನು ಒಪ್ಪಿಸಿ ನಿನ್ನನ್ನು ಕರೆಸಿಕೊಳ್ಳುತ್ತೇನೆ ಎಂದು ಪುಸಲಾಯಿಸಿ ಕಳುಹಿಸಿದ್ದಾನೆ. 

ಇದನ್ನು ನಂಬಿದ ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಕೂಡಲೇ ಪವನ್ ಸಾಮಾಜಿಕ ಜಾಲತಾಣದಲ್ಲಿ ತನ್ನ ಎಲ್ಲಾ ಖಾತೆಯನ್ನು ಬ್ಲಾಕ್ ಮಾಡಿ ಫೋನ್ ಸ್ವೀಚ್ ಆಫ್ ಮಾಡಿದ್ದಾನೆ. ಎಷ್ಟು ಬಾರಿ ಪ್ರಯತ್ನಿಸಿದರು ಯುವತಿಗೆ ಪವನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಬಳಿಕ ತಾನು ಮೋಸಹೋಗಿರುವುದಾಗಿ ತಿಳಿದ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಈ ದೂರಿನನ್ವಯ ಹೈದರಾಬಾದ್ ನ ಸರೋರ್ ನಗರ ಪೊಲೀಸರು ಪವನ್ ನನ್ನು ಬಂಧಿಸಿದ್ದಾರೆ. 

ದೂರಿನಲ್ಲಿ ಯುವತಿ ಎರಡು ವರ್ಷಗಳ ಬಳಿಕ ಪವನ್ ಹೈದರಾಬಾದ್ ಗೆ ಮರಳಿರುವುದಾಗಿ ತಿಳಿಯಿತು. ಕೂಡಲೇ ಆತನ ಮನೆಗೆ ಹೋದೆ. ಆಗ ಅವನು ನನಗೆ 10 ಲಕ್ಷ ರುಪಾಯಿ ನೀಡಿ ಎಲ್ಲವನ್ನು ಮರೆತು ಬಿಡುವಂತೆ ತಿಳಿಸಿದ್ದ ಎಂದು ದೂರಿದ್ದಾಳೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಬಜೆಟ್ 2026-27: ವಿದೇಶಿ ನೆರವಿನಲ್ಲಿ ಮಹತ್ತರ ಬದಲಾವಣೆ, ಬಾಂಗ್ಲಾದೇಶಕ್ಕೆ ಅರ್ಧದಷ್ಟು ನೆರವು ಕಡಿತ!

'ಕ್ಯಾಚ್ ಡ್ರಾಪ್, ರನೌಟ್ ಕೂಡ ಮಿಸ್': ಒಂದೇ ಎಸೆತದಲ್ಲಿ Vaibhav Suryavanshiಗೆ 2 ಬಾರಿ ಜೀವದಾನ, ನಗೆಪಾಟಲಿಗೀಡಾದ ಪಾಕ್ ಫೀಲ್ಡಿಂಗ್! Video

80 Pak ಸೈನಿಕರ ಹತ್ಯೆ, 8 ನಗರಗಳ ವಶ: ಬಲೂಚ್‌ನಲ್ಲಿ ಅಶಾಂತಿ ಸೃಷ್ಟಿಗೆ ಭಾರತ ಕಾರಣ ಆರೋಪ ತಿರಸ್ಕರಿಸಿದ ಕೇಂದ್ರ!

SCROLL FOR NEXT