ನವದೆಹಲಿ: ಪಂಜಾಬ್ ನ ತಾರ್ನ್ ತಾರನ್ ಅಂತಾರಾಷ್ಟ್ರೀಯ ಗಡಿಯಲ್ಲಿ ಐವರು ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ.
ಗಡಿಯಲ್ಲಿ ನುಸುಳುಕೋರರ ಚಲನವಲನವನ್ನು ಗಮನಿಸಿ ಬಿಎಸ್ಎಫ್ ಅವರನ್ನು ಹಿಮ್ಮೆಟ್ಟಿಸಲು ಮುಂದಾದರು. ಈ ವೇಳೆ ನುಸುಳುಕೋರರು ಬಿಎಸ್ಎಫ್ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಐವರು ನುಸುಳುಕೋರರು ಹತರಾಗಿದ್ದಾರೆ.
ಇನ್ನು ಬಿಎಸ್ಎಫ್ ಯೋಧರು ಕಾರ್ಯಾಚರಣೆ ಮುಂದುವರೆಸಿದ್ದು ನುಸುಳುಕೋರರು ಅಡಗಿ ಕುಳಿತಿರಬಹುದು ಎಂಬ ಶಂಕೆ ಮೇಲೆ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.