ಆಯುಷ್  ಸಚಿವಾಲಯ 
ದೇಶ

ವಿವಾದಕ್ಕೆ ಗ್ರಾಸವಾದ ಆಯುಷ್ ಕಾರ್ಯದರ್ಶಿ ನಡೆ!

ಆಯುಷ್ ಇಲಾಖೆಯ ಕಾರ್ಯದರ್ಶಿಯ ನಡೆಯೊಂದು ವಿವಾದಕ್ಕೆ ಗುರಿಯಾಗಿದ್ದು, ಅವರ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ನ ಸಂಸದರಾದ ಜ್ಯೋತಿಮಣಿ ಆಗ್ರಹಿಸಿದ್ದಾರೆ.

ನವದೆಹಲಿ: ಆಯುಷ್ ಇಲಾಖೆಯ ಕಾರ್ಯದರ್ಶಿಯ ನಡೆಯೊಂದು ವಿವಾದಕ್ಕೆ ಗುರಿಯಾಗಿದ್ದು, ಅವರ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ನ ಸಂಸದರಾದ ಜ್ಯೋತಿಮಣಿ ಆಗ್ರಹಿಸಿದ್ದಾರೆ.

ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಗೆ ಪತ್ರ ಬರೆದಿರುವ ಜ್ಯೋತಿ ಮಣಿ, ಹಿಂದಿ ಬಾರದೆಂಬ ಕಾರಣಕ್ಕಾಗಿ ಕೇಂದ್ರ ಆಯುಷ್ ಸಚಿವಾಲಯದ ಕಾರ್ಯದರ್ಶಿಗಳು, ತಮಿಳುನಾಡಿನಿಂದ ನ್ಯೂರೋಪತಿ ಪ್ರಾಕ್ಟೀಷನರ್ಸ್ ನ್ನು ಆನ್ ಲೈನ್ ಆಯುಷ್ ಸಚಿವಾಲಯದ ಕಾರ್ಯಕ್ರಮದಿಂದ ಹೊರ ಹೋಗುವಂತೆ ಕೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಸೆಷನ್ ನ್ನು ಇಂಗ್ಲೀಷ್ ನಲ್ಲಿ ನಡೆಸದೇ ಹಿಂದಿಯಲ್ಲಿ ನಡೆಸುತ್ತಿರುವುದಕ್ಕೆ ಈ ಹಿಂದೆಯೇ ನ್ಯೂರೋಪತಿ ಪ್ರಾಕ್ಟೀಷನರ್ ಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಸಹ ಹಿಂದಿ ತಿಳಿಯದೇ ಇರುವವರು ಕಾರ್ಯಕ್ರಮದಿಂದ ಹೊರನಡೆಯಿರಿ ಎಂದು ಹೇಳುವ ಮೂಲಕ ಅವಮಾನ ಮಾಡಲಾಗಿದೆ ಎಂದು ಜ್ಯೋತಿಮಣಿ ಹೇಳಿದ್ದಾರೆ.

ವೈದ್ಯಪದ್ಧತಿಯಲ್ಲೇ ವೈವಿಧ್ಯಮಯವಾಗಿರುವ ಆಯುಷ್ ಇಲಾಖೆ, ಸಚಿವಾಲಯಗಳಲ್ಲಿ ಒಂದೇ ಭಾಷೆಯನ್ನು ಹೇರುವುದಕ್ಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದು, ಶೀಘ್ರವೇ ಕಾರ್ಯದರ್ಶಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT